ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

 ರೇಣುಕಾಸ್ವಾಮಿಗೆ ಕರೆಂಟ್ ಶಾಕ್‌ ಕೊಡಲು ಬಳಸಿದ್ದ ಎಲೆಕ್ಟ್ರಿಕ್ ಮೆಗ್ಗರ್ ಡಿವೈಸ್ ಪತ್ತೆಗೆ ಶೋಧ

12:18 PM Jun 16, 2024 IST | Bcsuddi
Advertisement

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳ ಕ್ರೌರ್ಯ ಒಂದೊಂದಾಗಿ ಬಯಲಾಗುತ್ತಿದೆ. ಆರೋಪಿಗಳು ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿ ಕರೆಂಟ್ ಶಾಕ್ ಕೊಟ್ಟಿದ್ದರು ಎಂದ ವಿಚಾರ ಪೊಲೀಸರ ತನಿಖೆ ಬೆಳಕಿಗೆ ಬಂದಿದೆ. ಆರೋಪಿಗಳು ಎಲೆಕ್ಟ್ರಿಕ್ ಮೆಗ್ಗರ್ ಡಿವೈಸ್ ಬಳಸಿ ಕರೆಂಟ್ ಶಾಕ್ ಕೊಟ್ಟಿದ್ದರು. ಈ ಮೆಗ್ಗರ್ ಡಿವೈಸ್ ಎಲ್ಲಿದೆ ಅಂತ ಇದೀಗ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಈ ಸಂಬಂಧ ಎ5 ನಂದೀಶ್ ಹಾಗೂ ಇನ್ನೊಬ್ಬ ಆರೋಪಿ ವಿಚಾರಣೆ ನಡೆಸಲಾಗುತ್ತಿದೆ. ಈವರೆಗೂ ಪೊಲೀಸರಿಗೆ ಎಲೆಕ್ಟ್ರಿಕ್ ಮೆಗ್ಗರ್ ಡಿವೈಸ್ ಸಿಕ್ಕಿಲ್ಲ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ. ನಿಗೂಢ ಸ್ಥಳದಲ್ಲಿ ಮೆಗ್ಗರ್ ಡಿವೈಸ್ ಬಿಸಾಡಿರೋ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

Advertisement

Advertisement
Next Article