For the best experience, open
https://m.bcsuddi.com
on your mobile browser.
Advertisement

ರೇಣುಕಾಸ್ವಾಮಿ ಹತ್ಯೆ ಕೇಸ್‌: ನಟ ದರ್ಶನ್ ಎ1 ಆರೋಪಿ

09:40 AM Aug 22, 2024 IST | BC Suddi
ರೇಣುಕಾಸ್ವಾಮಿ ಹತ್ಯೆ ಕೇಸ್‌  ನಟ ದರ್ಶನ್ ಎ1 ಆರೋಪಿ
Advertisement

ಬೆಂಗಳೂರು:ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಎ1 ಆರೋಪಿಯನ್ನಾಗಿ ಮಾಡಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಪ್ರಕರಣದ ತನಿಖೆ ಮುಕ್ತಾಯ ಹಂತದಲ್ಲಿದ್ದು, ಕೆಲವೇ ದಿನಗಳಲ್ಲಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗುತ್ತದೆ. ಆರೋಪಿಗಳ ವಿವರವನ್ನು ಉಲ್ಲೇಖಿಸುವಾಗ ದರ್ಶನ್ ಅವರನ್ನು ಎ1 ಎಂದು ಪೊಲೀಸರು ಉಲ್ಲೇಖಿಸಲಿದ್ದಾರೆ ಎನ್ನಲಾಗಿದೆ.
ಈ ಪ್ರಕರಣದಲ್ಲಿ ಬಂಧನದ ಬಳಿಕ ದರ್ಶನ್ ಸ್ನೇಹಿತೆ ಪವಿತ್ರಾಗೌಡ ಅವರನ್ನು ಎ1 ಎಂದು, ದರ್ಶನ್ ಅವರನ್ನು ಎ2 ಆರೋಪಿ ಎಂದು ಪೊಲೀಸರು ಪರಿಗಣಿಸಿದ್ದರು. ಆದರೆ ತನಿಖೆ ವೇಳೆ ಇಡೀ ಕೃತ್ಯದ ಸೂತ್ರಧಾರ ದರ್ಶನ್ ಎಂಬುದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ದರ್ಶನ್ ಅವರನ್ನು ಎ1 ಆರೋಪಿ ಎಂದು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗುತ್ತದೆ ಎಂದು ತಿಳಿದು ಬಂದಿದೆ.

ದರ್ಶನ್ ರೇಣುಕಾಸ್ವಾಮಿ ಪತ್ತೆ ಹಚ್ಚಲು ಸುಪಾರಿ ಕೊಟ್ಟಿದ್ದರು. ರೇಣುಕಸ್ವಾಮಿ ಪತ್ತೆ ಬಳಿಕ ಕಿಡ್ನ್ಯಾಪ್‍ಗೆ ಸೂಚನೆ ನೀಡಿದ್ದರು. ಪಟ್ಟಣಗೆರೆ ಶೆಡ್‍ನಲ್ಲಿ ರೇಣುಕಾಸ್ವಾಮಿ ಮೇಲೆ ಹಲ್ಲೆ, ಹತ್ಯೆ ಹಾಗೂ ಶವ ವಿಲೇವಾರಿಗೆ ಹಣ ಕೊಟ್ಟಿದ್ದು, ಸಿಸಿಟಿವಿ ದೃಶ್ಯಗಳ ಡಿಲೀಟ್ ಮಾಡಿದ್ದು ಸೇರಿದಂತೆ ಇನ್ನೂ ಅನೇಕ ಆರೋಪಗಳು ದರ್ಶನ್‍ರನ್ನು ಎ1 ಆರೋಪಿ ಎಂದು ಉಲ್ಲೇಖಿಸಲು ಕಾರಣವಾಗಿದೆ.

Advertisement

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

Author Image

Advertisement