For the best experience, open
https://m.bcsuddi.com
on your mobile browser.
Advertisement

ರೇಣುಕಾಸ್ವಾಮಿ ಹತ್ಯೆ ಕೇಸ್: ನಾಲ್ವರು ಆರೋಪಿಗಳು ತುಮಕೂರು ಜೈಲಿಗೆ ಸ್ಥಳಾಂತರ

05:38 PM Jun 26, 2024 IST | Bcsuddi
ರೇಣುಕಾಸ್ವಾಮಿ ಹತ್ಯೆ ಕೇಸ್  ನಾಲ್ವರು ಆರೋಪಿಗಳು ತುಮಕೂರು ಜೈಲಿಗೆ ಸ್ಥಳಾಂತರ
Advertisement

ತುಮಕೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳನ್ನು ತುಮಕೂರು ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗಿದೆ.

ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳಾದ ರವಿಶಂಕರ್, ನಿಖಿಲ್, ಕೇಶವ್ ಹಾಗೂ ಕಾರ್ತಿಕ್‌ನನ್ನು ತುಮಕೂರು ಜಿಲ್ಲಾ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. ಈ ನಾಲ್ವರು ಆರೋಪಿಗಳನ್ನು 24ನೇ ಎಸಿಎಂಎಂ ನ್ಯಾಯಾಲಯ ತುಮಕೂರು ಕಾರಾಗೃಹಕ್ಕೆ ಶಿಫ್ಟ್ ಮಾಡುವಂತೆ ಆದೇಶಿಸಿದ ಹಿನ್ನೆಲೆ ಈ ತೀರ್ಮಾನ ಕೈಗೊಳ್ಳಲಾಗಿದೆ.

ಬಿಗಿ ಪೊಲೀಸ್ ಭದ್ರತೆಯಲ್ಲಿ ತುಮಕೂರು ಹೊರವಲಯದ ರಂಗಾಪುರದಲ್ಲಿರುವ ಕೇಂದ್ರ ಕಾರಾಗೃಹಕ್ಕೆ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳನ್ನು ಸ್ಥಳಾಂತರಿಸಿದ್ದಾರೆ. ಈ ಹಿನ್ನೆಲೆ ಕಾರಾಗೃಹ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಭದ್ರತಾ ದೃಷ್ಟಿಯಿಂದ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬೇರೆಡೆಗೆ ಸ್ಥಳಾಂತರಿಸಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಲಾಗಿತ್ತು. ಮನವಿಯನ್ನು ಪರಿಗಣಿಸಿದ ನ್ಯಾಯಾಲಯ ಪ್ರಕರಣದ ಈ ನಾಲ್ವರು ಆರೋಪಿಗಳನ್ನ ಪ್ರತ್ಯೇಕವಾಗಿಡಲು ಆದೇಶ ಹೊರಡಿಸಿತ್ತು.

Advertisement

Author Image

Advertisement