For the best experience, open
https://m.bcsuddi.com
on your mobile browser.
Advertisement

ರೇಣುಕಾಸ್ವಾಮಿ ಹತ್ಯೆ: ಚಿತ್ರದುರ್ಗದಲ್ಲಿ ತಡರಾತ್ರಿ ಸ್ಥಳ ಮಹಜರು ನಡೆಸಿದ ಪೊಲೀಸರು

09:55 AM Jun 14, 2024 IST | Bcsuddi
ರೇಣುಕಾಸ್ವಾಮಿ ಹತ್ಯೆ  ಚಿತ್ರದುರ್ಗದಲ್ಲಿ ತಡರಾತ್ರಿ ಸ್ಥಳ ಮಹಜರು ನಡೆಸಿದ ಪೊಲೀಸರು
Advertisement

ಚಿತ್ರದುರ್ಗ: ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳೊಂದಿಗೆ ನಿನ್ನೆ ತಡರಾತ್ರಿ 2 ಗಂಟೆಗೆ ನಗರದ ವಿವಿಧೆಡೆ ಸ್ಥಳ ಮಹಜರು ನಡೆಸಿದ್ದಾರೆ.

ರೇಣುಕಸ್ವಾಮಿಯನ್ನು ಬೆಂಗಳೂರಿಗೆ ಕರೆದೊಯ್ದ 4ನೇ ಆರೋಪಿ ರಾಘವೇಂದ್ರ ಹಾಗೂ ಇತರರೊಂದಿಗೆ ಮಹಜರು ನಡೆಸಿದ್ದಾರೆ. ರೇಣುಕಸ್ವಾಮಿ ಕೆಲಸ ಮಾಡುತ್ತಿದ್ದ ಐಯುಡಿಪಿ ಲೇಔಟ್ ನ ಖಾಸಗಿ ಫಾರ್ಮಸಿ, ಆತ ಬೈಕ್ ನಿಲ್ಲಿಸಿದ್ದ ಪೆಟ್ರೋಲ್ ಬಂಕ್ ಪ್ರದೇಶ, ರೇಣುಕಸ್ವಾಮಿಯನ್ನು ಕಾರಿಗೆ ಹತ್ತಿಸಿಕೊಂಡ ಚಳ್ಳಕೆರೆ ಗೇಟ್ ಹಾಗೂ ತುರುವನೂರು ರಸ್ತೆಯಲ್ಲಿರುವ ರೇಣುಕಸ್ವಾಮಿ ನಿವಾಸದ ಬಳಿ ಪೊಲೀಸರು ಆರೋಪಿಗಳೊಂದಿಗೆ ಸ್ಥಳ ಮಹಜರು ನಡೆಸಿದ್ದಾರೆ.

ಬೆಂಗಳೂರು ಪೊಲೀಸರು ಮಹಜರು ನಡೆಸಲು ಬರುತ್ತಾರೆಂಬ ಮಾಹಿತಿ ಮೇರೆಗೆ ಸ್ಥಳೀಯ ಪೊಲೀಸರು ಭದ್ರತೆಗಾಗಿ ಸಕಲ ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಚಳ್ಳಕೆರೆ ಗೇಟ್ ಬಳಿ ಭಾರಿ ಜನ ಸೇರಿದ್ದರು. ಇದರಿಂದಾಗಿ ಪೊಲೀಸರು ಪ್ರಕ್ರಿಯೆಯನ್ನು ಮುಂದೂಡಿದ್ದು, ತಡರಾತ್ರಿ ಸ್ಥಳ ಮಹಜರು ನಡೆಸಿದ್ದಾರೆ.

Advertisement

ಡಿವೈಎಸ್ ಪಿ ಕಚೇರಿಯಲ್ಲಿ ಗುರುವಾರ 8 ನೇ ಆರೋಪಿ ರವಿ ಶರಣಾಗಿದ್ದ. ಮಹಜರು ನಡೆಸುತ್ತಿದ್ದ ಸಂದರ್ಭದಲ್ಲಿ ಆರೋಪಿಯನ್ನು ಬೆಂಗಳೂರು ಪೊಲೀಸರಿಗೆ ಹಸ್ತಾಂತರಿಸಲಾಯಿತು

Author Image

Advertisement