For the best experience, open
https://m.bcsuddi.com
on your mobile browser.
Advertisement

ರೇಣುಕಾ ಸ್ವಾಮಿ ಕೊಲೆ ಕೇಸ್: ಕೊನೆಗೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ನಟ ದರ್ಶನ್

05:37 PM Sep 21, 2024 IST | BC Suddi
ರೇಣುಕಾ ಸ್ವಾಮಿ ಕೊಲೆ ಕೇಸ್  ಕೊನೆಗೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ನಟ ದರ್ಶನ್
Advertisement

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಕೊನೆಗೂ ಪ್ರಕರನಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಪ್ರಕರಣದ ಎ1 ಆರೋಪಿ ಪವಿತ್ರಾ ಸೇರಿದಂತೆ ಇನ್ನು ಕೆಲ ಆರೋಪಿಗಳು, ಈಗಾಗಲೇ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಅವರ ಅರ್ಜಿಗಳು ತಿರಸ್ಕೃತಗೊಂಡಿವೆ. ಆದರೆ ದರ್ಶನ್ ಮಾತ್ರ ಇಲ್ಲಿಯವರೆಗೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿರಲಿಲ್ಲ. ಇದೀಗ ಅವರೂ ಕೂಡ ಜಾಮೀನು ಕೋರಿ ಅರ್ಜಿ ಸಲ್ಲಿಸಿರುತ್ತಾರೆ.

ದರ್ಶನ್ ಅವರು ತಮ್ಮ ವಕೀಲರ ಕಡೆಯಿಂದ ಬೆಂಗಳೂರಿನ ಸೆಷನ್ಸ್ ಕೋರ್ಟ್‌ಗೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಇನ್ನು ಇಂದೇ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆ ಇದೆ. ಹಾಗೂ ಜಾಮೀನು ಅರ್ಜಿ ವಿಚಾರಣೆ ಮುಂದೂಡುವ ಸಂಭವವಿದೆ ಎನ್ನಲಾಗಿದೆ.

Advertisement

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

Author Image

Advertisement