ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಚಾರ್ಜ್ಶೀಟ್ನಲ್ಲಿ ಇಬ್ಬರು ನಟಿಯರ ಹೆಸರು ಉಲ್ಲೇಖ
05:11 PM Sep 10, 2024 IST
|
BC Suddi
Advertisement
ರೇಣುಕಾ ಸ್ವಾಮಿ ಕೊಲೆ ಪ್ರಕರಣ ಕುರಿತಂತೆ ಪೊಲೀಸರು ಚಾರ್ಜ್ಶೀಟ್ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಪ್ರಕರಣದ 14ನೇ ಆರೋಪಿ ಆಗಿರುವ ಪ್ರದೋಶ್ ದಾಖಲಿಸಿರುವ ಸ್ವ-ಇಚ್ಛಾ ಹೇಳಿಕೆ ಪ್ರಕಾರ, ರೇಣುಕಾ ಸ್ವಾಮಿ ತನ್ನ ನಕಲಿ ಇನ್ ಸ್ಟಾಗ್ರಾಂ ಖಾತೆಯಿಂದ ಕನ್ನಡದ ಇನ್ನಿಬ್ಬರು ನಟಿಯರಿಗೆ ಸಂದೇಶ ಕಳಿಸಿದ್ದನಂತೆ.
Advertisement
ರೇಣುಕಾ ಸ್ವಾಮಿ ಗೌತಮ್ KS ಹೆಸರಿನ ನಕಲಿ ಖಾತೆಯಿಂದ ನಟಿಯರಾದ ರಾಗಿಣಿ ದ್ವಿವೇದಿ & ಶುಭ ಪೂಂಜಾ ಅವರಿಗೂ ಸಹ ಅಶ್ಲೀಲ ಸಂದೇಶ ಕಳಿಸಿದ್ದ ಎಂದು ಪ್ರದೋಶ್ ದರ್ಶನ್ಗೆ ತಿಳಿಸಿದನಂತೆ. ಹೀಗೆಂದು ಪ್ರದೋಶ್ ತನ್ನ ಸ್ವ ಇಚ್ಛಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Next Article