ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ರೇಣುಕಾ ಸ್ವಾಮಿ ಹತ್ಯೆ ಕೇಸ್: ಪತ್ರಕರ್ತನ ಮೇಲೆ ಹಲ್ಲೆ, ದೂರು ದಾಖಲು

10:12 AM Jun 16, 2024 IST | Bcsuddi
Advertisement

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾಗಿ ದರ್ಶನ್ ಹಾಗೂ ಗ್ಯಾಂಗ್ ಜೈಲು ಪಾಲಾಗಿದೆ. ಇದೀಗ ದರ್ಶನ್ ಪ್ರಕರಣ ವರದಿ ಮಾಡಲು ತೆರಳಿದ್ದ ಪತ್ರಕರ್ತರೊಬ್ಬರ ಮೇಲೆ ತೀವ್ರವಾಗಿ ಹಲ್ಲೆ ಮಾಡಿದ್ದು, ಹಲ್ಲೆ ನಡೆಸಿದ ಅಪರಿಚಿತ ಗುಂಪಿನ ವಿರುದ್ಧ ದೂರು ದಾಖಲಾಗಿದೆ.

Advertisement

ನಿನ್ನೆ ದರ್ಶನ್, ಪವಿತ್ರಾ ಗೌಡ ಹಾಗೂ ಇನ್ನೂ ಹಲವು ಆರೋಪಿಗಳನ್ನು ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ಈ ಸಂದರ್ಭ ಕೋರ್ಟ್ ಆವರಣದಲ್ಲಿ ಭಾರಿ ಸಂಖ್ಯೆಯ ಜನ ಸೇರಿದ್ದು, ಇದರೊಂದಿಗೆ ಪತ್ರಕರ್ತರೂ ಸಹ ಸಾಕಷ್ಟು ಸಂಖ್ಯೆಯಲ್ಲಿ ಸೇರಿದ್ದರು. ಈ ವೇಳೆ ಮೊಬೈಲ್ ಹಿಡಿದು ವರದಿ ಮಾಡುತ್ತಿದ್ದ ಪತ್ರಕರ್ತನ ಮೇಲೆ ಅಪರಿಚಿತ ಗುಂಪೊಂದು ತೀವ್ರವಾಗಿ ಹಲ್ಲೆ ಮಾಡಿ ಪರಾರಿಯಾಗಿದೆ.

ಪತ್ರಕರ್ತನನ್ನು ಅಪರಿಚಿತರು ಸುಮಾರು 50 ಮೀಟರ್ ಎಳೆದೊಯ್ದು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಹಲ್ಲೆಯಿಂದ ಪತ್ರಕರ್ತನ ಮೂಗು, ಬಾಯಿಗಳಲ್ಲಿ ರಕ್ತ ಬಂದಿದೆ. ಪತ್ರಕರ್ತನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಅಪರಿಚಿತರು, ಇನ್ನೊಮ್ಮೆ ಕೋರ್ಟ್ ಆವರಣದಲ್ಲಿ ಕಾಣಿಸಿಕೊಂಡರೆ ಕೊಲ್ಲುತ್ತೇವೆಂದು ಬೆದರಿಕೆಯೊಡ್ಡಿದ್ದಾರೆ. ಜೊತೆಗೆ ಅವರ ಮೊಬೈಲ್ ಅನ್ನು ಸಹ ಕಸಿದುಕೊಂಡು ಪರಾರಿಯಾಗಿದ್ದಾರೆ. ಈ ಬಗ್ಗೆ ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement
Next Article