ರೈತರಿಗೆ ಖುಷಿ ಸುದ್ದಿ.! ಕೃಷಿ ಪಂಪ್ಸೆಟ್ಗಳಿಗೆ ವಿದ್ಯುತ್ ಸೌಲಭ್ಯಕ್ಕೆ ಅರ್ಜಿ ಆಹ್ವಾನ.!
04:50 PM Jul 29, 2024 IST
|
BC Suddi
Advertisement
Advertisement
ಶಿವಮೊಗ್ಗ: ತಾಲೂಕು ಗ್ರಾಮೀಣ ಮೆಸ್ಕಾಂ ಉಪವಿಭಾಗ ವ್ಯಾಪ್ತಿಗೆ ಒಳಪಡುವ ಅಬ್ಬಲಗೆರೆ, ಪಿಳ್ಳಂಗಿರಿ, ಹೊಳಲೂರು, ಗಾಜನೂರು ಮತ್ತು ಸಂತೆಕಡೂರು ಶಾಖಾ ವ್ಯಾಪ್ತಿಗೆ ಒಳಪಡುವ ಪ.ಜಾ/ಪ.ಪಂ.ಕ್ಕೆ ಸೇರುವ ರೈತರು ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆಯಡಿ ಕೃಷಿ ಪಂಪ್ಸೆಟ್ಗಳಿಗೆ ವಿದ್ಯುತ್ ಸೌಲಭ್ಯ ಪಡೆಯಲು ಈ ಹಿಂದೆ ಗಂಗಾಕಲ್ಯಾಣ ಮತ್ತು ಎಸ್ಸಿಪಿ/ಟಿಎಸ್ಪಿ ಯೋಜನೆಯಡಿಲ್ಲಿ ವಿದ್ಯುತ್ ಸಂಪರ್ಕ ಪಡೆಯದ ರೈತರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಗ್ರಾಮೀಣ ಉಪವಿಭಾಗ ಮೆಸ್ಕಾಂ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಆರ್ಟಿಸಿ, ಆಧಾರ್ ಕಾಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಫೋಟೋ, ಬಿಪಿಎಲ್ ರೇಷನ್ ಕಾರ್ಡ್, ಬ್ಯಾಂಕ್ ಪಾಸ್ಬುಕ್ ಜೇರಾಕ್ಸ್ ಮತ್ತು ಫೋನ್ ನಂ.ಗಳನ್ನು ಲಗತ್ತಿಸಿ ಆಗಸ್ಟ್ 11 ರೊಳಗಾಗಿ ಸಲ್ಲಿಸುವಂತೆ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Next Article