ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ರೈತರಿಗೆ “ಲಾಭದಾಯಕ ಹೈನುಗಾರಿಕೆ ತರಬೇತಿ : ನೊಂದಣಿಗೆ ಸೂಚನೆ

08:04 AM Dec 27, 2023 IST | Bcsuddi
Advertisement

 

Advertisement

ಚಿತ್ರದುರ್ಗ : ಹಿರಿಯೂರು ತಾಲ್ಲೂಕು ಬಬ್ಬೂರು ಫಾರಂ ನಲ್ಲಿರುವ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜಿಲ್ಲೆಯ ರೈತರಿಗೆ “ಲಾಭದಾಯಕ ಹೈನುಗಾರಿಕೆ” ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಡಿ. 28 ರಂದು ಬೆಳಗ್ಗೆ 10  ಗಂಟೆಗೆ ಹಮ್ಮಿಕೊಂಡಿದ್ದು ಆಸಕ್ತ ರೈತರು ಭಾಗವಹಿಸಬಹುದಾಗಿದೆ.

ತರಬೇತಿ ಕಾರ್ಯಕ್ರಮದಲ್ಲಿ ಪಶುಸಂಗೋಪನಾ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕ ಡಾ. ದೊಡ್ಡಮಲ್ಲಯ್ಯ, ಹಿರಿಯೂರು ಪಶು ಆಸ್ಪತ್ರೆಯ ಮುಖ್ಯ ಪಶು ವೈದ್ಯಾಧಿಕಾರಿ ಡಾ. ನಾಗರಾಜ್  ಅವರು, ರಾಸುಗಳಲ್ಲಿ ಹೈನುಗಾರಿಕೆಗೆ ಉತ್ತಮ ತಳಿಗಳ ಆಯ್ಕೆ, ಕೊಟ್ಟಿಗೆ ಮತ್ತು ಮೇವಿನ ನಿರ್ವಹಣೆ ಹಾಗೂ ರಾಸುಗಳ ಆರೋಗ್ಯ ನಿರ್ವಹಣೆ ಬಗ್ಗೆ ವಿಶೇಷ ಉಪನ್ಯಾಸ ನೀಡುವರು.

ಆಸಕ್ತ 50 ಜನ ರೈತಭಾಂದವರು ಸದರಿ ತರಬೇತಿಯಲ್ಲಿ ಭಾಗವಹಿಸಿಸಲು ರಜನೀಕಾಂತ. ಆರ್ ಸಹಾಯಕ ಕೃಷಿ ನಿರ್ದೇಶಕರು, ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಬಬ್ಬೂರು ಫಾರಂ (8277931058), ಉಷಾರಾಣಿ ಎಂ (9980730696) ಟಿ.ಪಿ. ರಂಜಿತಾ, ಕೃಷಿ ಅಧಿಕಾರಿ (8277930959) ಮತ್ತು ಪವಿತ್ರಾ ಎಂ. ಜೆ. (9535412286) ರವರ ದೂರವಾಣಿ ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿ ತರಬೇತಿಯ ಸದುಪಯೋಗ ಪಡೆದುಕೊಳ್ಳಬಹುದು.

ಮೊದಲು ನೋಂದಾವಣಿ ಮಾಡಿಕೊಂಡ 50 ಜನ ರೈತಭಾಂದವರಿಗೆ ಆದ್ಯತೆ ಮೇರೆಗೆ ಪರಿಗಣಿಸಲಾಗುವುದು ಹಾಗೂ ತರಬೇತಿಗೆ ಆಗಮಿಸುವ ರೈತಭಾಂದವರಿಗೆ ವಾಸ್ತವಿಕ ಬಸ್ ದರದ ಪ್ರಯಾಣ ವೆಚ್ಚ ನೀಡಿ ಊಟದ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ಬಬ್ಬೂರಿನ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ರಜನೀಕಾಂತ ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags :
ರೈತರಿಗೆ “ಲಾಭದಾಯಕ ಹೈನುಗಾರಿಕೆ ತರಬೇತಿ ನೊಂದಣಿಗೆ ಸೂಚನೆ
Advertisement
Next Article