ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ರ‍್ಯಾಂಕ್‌ ಗಾಗಿ ಹರಕೆ: ಶಿವಲಿಂಗದ ಮೇಲೆ ಕೋರಿಕೆ ಬರೆದ ವಿದ್ಯಾರ್ಥಿ

09:21 AM Feb 06, 2024 IST | Bcsuddi
Advertisement

ಕಾರವಾರ: ಉತ್ತರ ಕನ್ನಡದ  ಶಿರಸಿಯಲ್ಲಿ ಪಿಯುಸಿ ವಿದ್ಯಾರ್ಥಿ ತನಗೆ ಉತ್ತಮ ಅಂಕ ನೀಡಿ ರ‍್ಯಾಂಕ್‌ನಲ್ಲಿ ಉತ್ತೀರ್ಣ ಮಾಡಬೇಕು ಎಂದು ಕೋರಿಕೆ ಈಡೇರಿಕೆಗಾಗಿ ದೇವರ ಶಿವಲಿಂಗದ ಮೇಲೆಯೇ ಬರೆದು ಪೊಲೀಸರ ಅತಿಥಿಯಾಗಿದ್ದಾನೆ.

Advertisement

ಫೆ.4 ರಂದು ಶಿರಸಿಯ ನರಬೈಲ್ ಗ್ರಾಮದ ಪ್ರಸಿದ್ದ ಸೋಮೇಶ್ವರ ದೇವಸ್ಥಾನದ ಶಿವಲಿಂಗದ  ಮೇಲೆ ಇಂಗ್ಲಿಷ್‌ನಲ್ಲಿ ಜೆ.ಇ 2024, 2026 ಎಂದು ಬರೆಯಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ದೇವಸ್ಥಾನದ ಮುಂಭಾಗದಲ್ಲಿ ಇದ್ದ ಸಿಸಿ ಕ್ಯಾಮರಾವನ್ನು ಪರಿಶಿಲಿಸಿದ್ದಾರೆ.ತನಿಖೆಯ ವೇಳೆ ಕೆ.ಹೆಚ್. ಬಿ ಕಾಲೋನಿಯ ದ್ವಿತೀಯ ವರ್ಷದ ಪಿಯು ವಿದ್ಯಾರ್ಥಿ ಬರೆದಿರುವ ವಿಚಾರ ತಿಳಿಯಲ್ಪಟ್ಟಿತ್ತು. ವಿಚಾರಣೆ ನಡೆಸಿದಾಗ ಈತ ಪಿಯುಸಿ ಮೊದಲ ವರ್ಷದಲ್ಲಿ 98% ಅಂಕ ಪಡೆದು ಉತ್ತೀರ್ಣನಾಗಿದ್ದ. ದೇವರ ಮೇಲೆ ಅತೀವ ಭಕ್ತಿ ಹೊಂದಿದ್ದ ಈತ ಜೆ.ಇ ಪರೀಕ್ಷೆ ಕಟ್ಟಿದ್ದ. ಆದರೆ ಫಲಿತಾಂಶದಲ್ಲಿ ಹೆಚ್ಚು ಅಂಕ ಬಾರದ ಕಾರಣ ಹೀಗೆ ಬರೆದಿದ್ದೇನೆ ಎಂದು ಹೇಳಿದ್ದಾನೆ. ಆರೋಪಿ ಅಪ್ರಾಪ್ತ ಬಾಲಕನಾದ ಕಾರಣ ಬಾಲಸ್ನೇಹಿ ಪೊಲೀಸರಿಗೆ ಪ್ರಕರಣ ಹಸ್ತಾಂತರಿಸಲಾಗಿದೆ.

Advertisement
Next Article