For the best experience, open
https://m.bcsuddi.com
on your mobile browser.
Advertisement

ಲೋಕಸಭಾ ಚುನಾವಣೆ: ನಾನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದೇನೆ.!

07:53 AM Mar 16, 2024 IST | Bcsuddi
ಲೋಕಸಭಾ ಚುನಾವಣೆ  ನಾನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದೇನೆ
Advertisement

ಬೆಂಗಳೂರು: ಬಿಜೆಪಿಯ ಹಿರಿಯ ನಾಯಕ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ಶಿವಮೊಗ್ಗ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುವುದಾಗಿ ಹೇಳಿದ್ದಾರೆ.

ಈ ಕ್ಷೇತ್ರದಲ್ಲಿ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪನವರ ಮಗ, ಹಾಲಿ ಸಂಸದ ಬಿ.ವೈ. ರಾಘವೇಂದ್ರ ಅವರೇ ಅಭ್ಯರ್ಥಿಯಾಗಲಿದ್ದಾರೆ ಎಂದು ಪಕ್ಷ ಘೋಷಿಸಿದೆ.

Advertisement

ಶಿವಮೊಗ್ಗದಲ್ಲಿ ನಡೆದ ಅಭಿಪ್ರಾಯ ಸಂಗ್ರಹಣಾ ಸಭಯಲ್ಲಿ ಈಶ್ವರಪ್ಪ ಈ ನಿರ್ಧಾರ ಪ್ರಕಟಿಸಿದ್ದಾರೆ. ಇದು ಉದ್ವೇಗದ ತೀರ್ಮಾನ ಅಲ್ಲ. ಕಾಂಗ್ರೆಸ್ ಪಕ್ಷದ ಕುಟುಂಬ ರಾಜಕಾರಣವನ್ನು ವಿರೋಧಿಸಿಕೊಂಡು ಬಂದಿದ್ದೆವು. ಈಗ ಯಡಿಯೂರಪ್ಪ ಕುಟುಂಬ ರಾಜಕಾರಣಕ್ಕೆ ಮನ್ನಣೆ ನೀಡುವುದು ಎಷ್ಟು ಸರಿ? ಪಕ್ಷವನ್ನು ಕುಟುಂಬ ರಾಜಕಾರಣದ ಹಿಡಿತದಿಂದ ಬಿಡಿಸಲು ಹೋರಾಟ ಆರಂಭಿಸಿದ್ದೇನೆ ಎಂದರು.

Tags :
Author Image

Advertisement