ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'ಲೋಕಸಭೆಗೂ ಮುನ್ನವೇ ಕಾಂಗ್ರೆಸ್ ಸರ್ಕಾರ ಪತನ'- ಕಟೀಲ್‌

10:20 AM Nov 05, 2023 IST | Bcsuddi
Advertisement

ಬಾಗಲಕೋಟೆ: ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ. ಅಲ್ಲದೇ, ಸಿಎಂ ಬದಲಾವಣೆ ಸಹ ಫಿಕ್ಸ್ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್‌ ಭವಿಷ್ಯ ನುಡಿದಿದ್ದಾರೆ.

Advertisement

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆಪರೇಶನ್ ಕಮಲ ನಡೆಯಲ್ಲ. ಬದಲಾಗಿ ಆಪರೇಶನ್ ಹಸ್ತ ನಡೆಯುತ್ತಿದೆ. ಬರದ ನಡುವೆ ಕಾಂಗ್ರೆಸ್ ನಾಯಕರು ಕುರ್ಚಿಗಾಗಿ ಕಸರತ್ತು ನಡೆಸಿದ್ದಾರೆ. ನಾವೇನು ಸರ್ಕಾರ ಕೆಡವಲ್ಲ. ಅದು ತಾನಾಗಿಯೇ ಬೀಳಲಿದೆ ಎಂದು ವಾಗ್ದಾಳಿ ನಡೆಸಿದ್ದಾರೆ
ಸರ್ಕಾರ ಬೀಳೋದನ್ನೇ ನಾವು ಕಾಯುತ್ತಿಲ್ಲ. ರಾಜ್ಯದ ಜನತೆಯ ಪರವಾಗಿ ನಮ್ಮ ಪಕ್ಷ ಇದೆ.

ಅಧಿಕಾರಕ್ಕಾಗಿ ಜಗಳ ಇರುವುದು ಕಾಂಗ್ರೆಸ್‌ನಲ್ಲಿ. ಸರ್ಕಾರ ಪತನವಾದರೆ ಅದಕ್ಕೆ ಕಾಂಗ್ರೆಸ್ ಪಕ್ಷವೇ ಹೊಣೆಯಾಗಲಿದೆ. ಬರ ಕಾಮಗಾರಿಯನ್ನು ಸಂಪೂರ್ಣ ನಿರ್ಲಕ್ಷಿಸಿರುವ ಕಾಂಗ್ರೆಸ್‌ ಸರ್ಕಾರಕ್ಕೆ ರೈತರ ಶಾಪ ತಟ್ಟಲಿದೆ ಎಂದರು. ವಿಪಕ್ಷ ನಾಯಕನ ಆಯ್ಕೆ ಏಕೆ ಆಗುತ್ತಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕಟೀಲ್, ಕಾದು ನೋಡೋಣ, ಹೇಗಾದರೂ ಮುಖ್ಯಮಂತ್ರಿ ಬದಲಾಗಲಿದ್ದಾರೆ. ಬದಲಾದ ಸನ್ನಿವೇಶದಲ್ಲಿ ಆ ಬಗ್ಗೆ ಯೋಚಿಸೋಣ ಎಂದು ಹಾರಿಕೆಯ ಉತ್ತರ ನೀಡಿದರು.

Advertisement
Next Article