For the best experience, open
https://m.bcsuddi.com
on your mobile browser.
Advertisement

'ಲೋಕಸಭೆ ಚುನಾವಣೆ ಸಂಬಂಧ ನಾಳೆ ಜನರ ಸಮ್ಮುಖದಲ್ಲೇ ನನ್ನ ನಿರ್ಧಾರ ಪ್ರಕಟಿಸುತ್ತೇನೆ- ಸುಮಲತಾ

06:17 PM Apr 02, 2024 IST | Bcsuddi
 ಲೋಕಸಭೆ ಚುನಾವಣೆ ಸಂಬಂಧ ನಾಳೆ ಜನರ ಸಮ್ಮುಖದಲ್ಲೇ ನನ್ನ ನಿರ್ಧಾರ ಪ್ರಕಟಿಸುತ್ತೇನೆ  ಸುಮಲತಾ
Advertisement

ಬೆಂಗಳೂರು: ಮಂಡ್ಯ ನಗರದ ಕಾಳಿಕಾಂಬ ಸಮುದಾಯ ಭವನದ ಆವರಣದಲ್ಲಿ ನಾಳೆ (ಬುಧವಾರ) ಬೆಳಿಗ್ಗೆ 10 ಗಂಟೆಗೆ ಬೆಂಬಲಿಗರ ಸಭೆ ನಡೆಸಲಿದ್ದೇನೆ. ಆ ಬಳಿಕ ಲೋಕಸಭೆ ಚುನಾವಣೆ ಸಂಬಂಧ ಜನರ ಸಮ್ಮುಖದಲ್ಲೇ ನನ್ನ ನಿರ್ಧಾರವನ್ನು ಪ್ರಕಟಿಸುತ್ತೇನೆ ಎಂ ದು ಸಂಸದೆ ಸುಮಲತಾ

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋ ಸ್ಟ್ ಹಂ ಚಿಕೊಂಡಿರುವ ಅವರು, ನನ್ನ ಸ್ವಾಭಿಮಾನಿ ಮಂಡ್ಯದ ಬಂಧುಗಳೆ, ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಾನು ಕಳೆದ ಬಾರಿ ಐತಿಹಾಸಿಕ ಗೆಲುವು ಸಾಧಿಸಿದ ನಂತರ ಈ ಕ್ಷೇ ತ್ರದ ಬಗ್ಗೆ ರಾಷ್ಟ್ರೀ ಯ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಈ ಸಲದ ಲೋಕಸಭೆ ಚುನಾವಣೆಯೂ ಅದಕ್ಕೆ ಹೊರತಾಗಿಲ್ಲ. ಈಗಾಗಲೇ ರಾಜಕೀಯ ಪಲ್ಲಟಕ್ಕೆ ಮಂಡ್ಯ ಕ್ಷೇತ್ರ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.

ಚುನಾವಣೆ ಸ್ಪರ್ಧಿಸುವ ಬಗ್ಗೆ ನನ್ನ ನಿಲುವಿಗಾಗಿ ಅನೇಕರು ಕಾಯುತ್ತಿದ್ದಾರೆ. ಈಗಾಗಲೇ ಆ ಕುರಿತಂತೆ ಗಂಭೀ ರ ಚಿಂತನೆ ಕೂಡ ಮಾಡಲಾಗಿದೆ. ನಿಮ್ಮೆಲ್ಲರ ನೆಚ್ಚಿನ ರೆಬಲ್ ಸ್ಟಾರ್ ಅಂಬರೀಶ್‌ ಅವರಾಗಲಿ, ನಾನಾಗಲಿ ನಮ್ಮ ಕುಟುಂಬವಾಗಲಿ ಯಾವತ್ತಿಗೂ ಅಧಿಕಾರಕ್ಕೆ ಅಂಟಿಕೊಂಡು ಕೂತಿಲ್ಲ. ಮಂ ಡ್ಯಕ್ಕಾಗಿ, ನನ್ನ ಮಂ ಡ್ಯದ ಸ್ವಾಭಿಮಾನಿಗಳ ಸೇ ವೆಗೆ ಯಾವತ್ತಿಗೂ ನಾವು ಬದ್ಧ. ಹಾಗಾಗಿಯೇ ಏನೇ ನಿರ್ಧಾರ ತಗೆದುಕೊಂಡರೂ ನಿಮ್ಮೊಂದಿಗೆ ಚರ್ಚಿಸಿಯೇ ಮುಂದುವರಿಯುವೆ ಎಂದು ಹೇಳಿದ್ದಾರೆ.

Advertisement

ನಿಮ್ಮ ಭಾವನೆಗಳನ್ನು ನನ್ನೊಂದಿಗೆ ಹಂಚಿಕೊಳ್ಳಲು ನಿಮ್ಮ ಸಮಯವನ್ನು ನನಗೆ ಕೊಟ್ಟು ಮನೆವರೆಗೂ ಬಂದಿದ್ದೀ ರಿ. ಕೆಲವರು ತಾವು ಇದ್ದಲ್ಲೇ ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದೀ ರಿ. ನಿಮ್ಮೆಲ್ಲರಿಗೂ ಧನ್ಯವಾದಗಳು. ನಿಮ್ಮ ಪ್ರೀ ತಿ ದೊಡ್ಡದು. ಯಾವತ್ತೂ ಅದು ಹಾಗೆಯೇ ಇರಲಿ ಎಂದು
ಆಶಿಸುವೆ ಎಂದು ತಿಳಿಸಿದ್ದಾರೆ.

ನಾಳೆ ಬೆಳಗ್ಗೆ 10 ಗಂ ಟೆಗೆ ಕಾಳಿಕಾಂಬ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಂತರ ದೇವಸ್ಥಾನದ ಆವರಣದಲ್ಲೇ ನನ್ನ ಮತ್ತು ನಿಮ್ಮೆಲ್ಲರ ನಿಲುವನ್ನು ಸ್ಪಷ್ಟಪಡಿಸುವ ಹಾಗೂ ಮಂಡ್ಯ ಲೋಕಸಭಾ ಚುನಾವಣೆ ಕುರಿತಂ ತೆ ನನ್ನ ನಿರ್ಧಾರವನ್ನು ನಿಮ್ಮೆಲ್ಲರ ಮುಂ ದೆಯೇ ಪ್ರಕಟಿಸುತ್ತಿದ್ದೇನೆ. ನಮ್ಮೊಂ ದಿಗೆ ನಮ್ಮೆಲ್ಲರ ಪ್ರೀತಿಯ ದರ್ಶನ್, ಅಭಿಷೇ ಕ್ ಅಂ ಬರೀ ಷ್ ಇರಲಿದ್ದಾರೆ. ತಮ್ಮ ಸಲಹೆ ಮತ್ತು ಸೂಚನೆ ಹಾಗೂ ಭಾವನೆಗಳಿಗೆ ಯಾವತ್ತೂ ನಾನು ನೋವು ತರಲಾರೆ. ನಿಮ್ಮ ನಡೆಯೇ ನನ್ನದೂ ಆಗಿರಲಿದೆ. ಬನ್ನಿ, ಜೊತೆಯಾಗಿ ಮಂಡ್ಯವನ್ನು ಮತ್ತಷ್ಟು ಅಭಿವೃದ್ಧಿಪಡಿಸೋಣ ಎಂದು ಬರೆದುಕೊಂಡಿದ್ದಾರೆ.

Author Image

Advertisement