ಲೋಕಸಮರ: 'ಬಹುಜನ ಸಮಾಜ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ'-ಮಾಯಾವತಿ
05:48 PM Mar 09, 2024 IST | Bcsuddi
Advertisement
ಲಖನೌ: ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ ಮಹತ್ವದ ಘೋಷಣೆ ಮಾಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಹೇಳಿದ್ದಾರೆ. ಈ ಮೂಲಕ ಮೈತ್ರಿ ಮಾಡಿಕೊಳ್ಳಬಹುದು ಬಗ್ಗೆ ಇದ್ದ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ಈ ಕುರಿತು ಅವರು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿ, ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಹೇಳಿಕೊಂಡಿದ್ದಾರೆ.ಬಿಎಸ್ಪಿ ತನ್ನ ಸ್ವಂತ ಬಲದ ಮೇಲೆ ಸಂಪೂರ್ಣ ಸಿದ್ಧತೆ ಮತ್ತು ಶಕ್ತಿಯೊಂದಿಗೆ ದೇಶದಲ್ಲಿ ಲೋಕಸಭೆ ಸಾರ್ವತ್ರಿಕ ಚುನಾವಣೆಯನ್ನು ಎದುರಿಸುತ್ತಿದೆ ಎಂದು ಬರೆದಿದ್ದಾರೆ.
ಚುನಾವಣಾ ಮೈತ್ರಿ ಅಥವಾ ತೃತೀಯ ರಂಗ ರಚನೆಯ ಬಗ್ಗೆ ವದಂತಿಗಳನ್ನು ಹರಡುವುದು ಸಂಪೂರ್ಣ ಸುಳ್ಳು . ತಪ್ಪು ಸುದ್ದಿ ನೀಡಿ ಮಾಧ್ಯಮಗಳು ತನ್ನ ವಿಶ್ವಾಸಾರ್ಹತೆಯನ್ನು ಕಳೆದುಕೊಳ್ಳಬಾರದು. ಜನರೂ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದ್ದಾರೆ.
Advertisement