ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವಚನ   -ಉರಿಲಿಂಗಪೆದ್ದಿಗಳ ಪುಣ್ಯಸ್ತ್ರೀ ಕಾಳವ್ವೆ.!

07:40 AM Sep 04, 2024 IST | BC Suddi
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.

ವಚನ:

ಭಾಗ್ಯವುಳ್ಳ ಪುರುಷಂಗೆ ಕಾಮಧೇನು

ಕಾಮಿಸಿದುದನೀವುದಯ್ಯಾ.

ನಿರ್ಭಾಗ್ಯ ಪುರುಂಷಗೆ ಕಾಮಧೇನು

ತುಡುಗುಣಿಯಾಗಿ ತೋರುವುದಯ್ಯಾ.

ಸತ್ಯಪುರುಷಂಗೆ ಕಲ್ಪವೃಕ್ಷ

ಕಲ್ಪಿಸಿದುದನೀವುದಯ್ಯಾ.

ಅಸತ್ಯಪುರುಷಂಗೆ ಕಲ್ಪವೃಕ್ಷ

ಬೊಬ್ಬುಳಿಯಾಗಿ ತೋರುವುದಯ್ಯಾ.

ಧರ್ಮಪುರುಷಂಗೆ ಚಿಂತಾಮಣಿ

ಚಿಂತಿಸಿದುದನೀವುದಯ್ಯಾ.

ಅಧರ್ಮಪುರುಷಂಗೆ ಚಿಂತಾಮಣಿ

ಗಾಜಿನಮಣಿಯಾಗಿ ತೋರುವುದಯ್ಯಾ.

ಶ್ರೀಗುರು ಕಾರುಣ್ಯವುಳ್ಳ ಸದ್ಭಕ್ತಂಗೆ

ಜಂಗಮಲಿಂಗವಾಗಿ ತೋರುವುದಯ್ಯಾ.

ಭಕ್ತನಲ್ಲದ ಪಾಪಿಷ್ಠಂಗೆ ಜಂಗಮಲಿಂಗ

ಮಾನವನಾಗಿ ತೋರುವುದಯ್ಯಾ.ಉರಿಲಿಂಗಪೆದ್ದಿಗಳರಸು ಒಲ್ಲನವ್ವಾ.

 

-ಉರಿಲಿಂಗಪೆದ್ದಿಗಳ ಪುಣ್ಯಸ್ತ್ರೀ ಕಾಳವ್ವೆ

Tags :
ವಚನ   -ಉರಿಲಿಂಗಪೆದ್ದಿಗಳ ಪುಣ್ಯಸ್ತ್ರೀ ಕಾಳವ್ವೆ.!
Advertisement
Next Article