ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವಚನ:   --ಚೆನ್ನಯ್ಯ

06:55 AM Jun 05, 2024 IST | Bcsuddi
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ

ವಚನ: :

ಭವಿ ಮಾಡಿದುದನುಂಡರೆ ಪಾಕ ಕಿಲ್ಬಿಷವೆಂಬಿರಿ.

ಶಿವಭಕ್ತರು ಪಾದೋದಕ ಪ್ರಸಾದವ ಕೊಂಬುವಲ್ಲಿ

ಭವಿಮಿಶ್ರವೆಂದು ವಿಚಾರಿಸಿ ಕೇಳುವಿರಿ.

ಬೆಲ್ಲ, ಸಕ್ಕರೆ, ಉಪ್ಪು, ತೈಲ, ತುಪ್ಪ, ಭವಿಪಾಕವ ಭುಂಜಿಸುವಿರಿ.

'ಯಥಾ ದೇಹಂ ತಥಾಹಂಚ ಲಿಂಗವಾಯತೆ'

ಭವಿಪಾಕ ಕಿಲ್ಬಿಷವೆಂದು ಕಿಲ್ಬಿಷವ ಭುಂಜಿಸಿದ ಬಳಿಕ

ಅಚ್ಚಲಿಂಗಾಗವೆಲ್ಲಿಹುದೊ ವ್ರತಗೇಡಿಗಳಿರಾ ?

ನಿಮ್ಮ ದೇವಭಕ್ತರೆಂದು ಪೂಜಿಸಿದವರಿಗೆ ಭವ ತಪ್ಪದು.

ನಮ್ಮ ಶಿವಗಣಂಗಳು ಅಚ್ಚಲಿಂಗೈಕ್ಯರು.

ಅವರು ಅನಾದಿ ಪಾದೋದಕ ಪ್ರಸಾದವ ಕೊಂಬುವರು.

ಅವರು ಅನಾದಿಲಿಂಗಾಂಗಿಗಳು.

ಅವರು ಮುಟ್ಟಿದ್ದೆಲ್ಲ ಪಾವನ

ಅವರು ನೋಡಿದ್ದೆಲ್ಲ ಪವಿತ್ರವೆಂದ ನಿಮ್ಮ ಶರಣಚೆನ್ನಯ್ಯಪ್ರಿಯ ನಿರ್ಮಾಯಪ್ರಭುವೆ.

 

-ಚೆನ್ನಯ್ಯ

Tags :
ವಚನ:   --ಚೆನ್ನಯ್ಯ
Advertisement
Next Article