ವಚನ : -ತೋಂಟದ ಸಿದ್ಧಲಿಂಗ ಶಿವಯೋಗಿಗಳು
07:30 AM Feb 06, 2024 IST
|
Bcsuddi
Advertisement
Advertisement
ಸ್ವತಂತ್ರ ಲಿಂಗಾಯತ ಧರ್ಮದ ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ, ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.
https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.
ವಚನ: :
: ಕೆರೆಯೊಡೆದ ಬಳಿಕ ತೂಬು ತಡೆಯಬಲ್ಲುದೇ?.
ಒಡೆದ ಮಡಕೆಗೆ ಒತ್ತುಮಣ್ಣಕೊಟ್ಟರೆ ನಿಲಬಲ್ಲುದೇ ಅಯ್ಯ?.
ಮುತ್ತೊಡೆದರೆ ಹತ್ತಬಲ್ಲುದೇ?.
ಸುರಚಾಪ ನಿರ್ಧರವಾಗಬಲ್ಲುದೇ ಅಯ್ಯ?.
ಚಿತ್ತವೊಡೆದರೆ ಭಕ್ತಿ ನೆಲೆಗೊಳ್ಳದು.
ಭಕ್ತಿ ಬೀಸರವಾದರೆ, ಮುಕ್ತಿಯೆಂಬುದು ಎಂದಿಗೂ ಇಲ್ಲ ಕಾಣಾ.
ಇದು ಕಾರಣ,
ಚಿತ್ತ ಲಿಂಗವನಪ್ಪಿ ಒಡೆಯದೆ,
ಭಕ್ತಿ ಬೀಸರವೊಗದೆ,
ನಿಮ್ಮ ಕೂಡಿ, ನಿತ್ಯ ನಿರ್ಮುಕ್ತನಾದೆನು ಕಾಣಾ.
ಎಲ್ಲರ ಪರಿಯಲ್ಲ, ಎನ್ನ ಪರಿ ಬೇರೆ ನೋಡಾ,ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
-ತೋಂಟದ ಸಿದ್ಧಲಿಂಗ ಶಿವಯೋಗಿಗಳು
Next Article