ವಚನ-: ---ದಸರಯ್ಯ
07:52 AM Aug 04, 2024 IST
|
BC Suddi
Advertisement
ಸ್ವತಂತ್ರ ಲಿಂಗಾಯತ ಧರ್ಮದ ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ, ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.
Advertisement
https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.
ವಚನ:
ಎಲ್ಲವನರಿದಲ್ಲಿ,
ಕಡೆಯಲ್ಲಿ ಕೊಲ್ಲಬೇಕೆಂಬುದೊಂದು ವೇದ ಉಂಟೆ?
ಶಾಸ್ತ್ರವನೆಲ್ಲವ ಕಲಿತಲ್ಲಿ ಗೆಲ್ಲ ಸೋಲಕ್ಕೆ
ಹೋರಬೇಕೆಂದು ಕಡೆಯಲ್ಲಿ ಒಂದು ಸೊಲ್ಲುಂಟೆ?
ಪುರಾಣವನ್ನೆಲ್ಲವನೋದಿದಲ್ಲಿ ಸರ್ವಜೀವವ
ಕೊಲ್ಲು ಕೊರೆ ಎಂಬುದೊಂದು ದಳ್ಳುರಿಯುಂಟೆ?
ಶ್ರುತಿಯ ಕೇಳುವಲ್ಲಿ ಸ್ಮೃತಿಯನಂಗೀಕರಿಸುವಲ್ಲಿ
ಸರ್ವಹತವ ಮಾಡಬೇಕೆಂಬುದೊಂದು ಗತಿಯುಂಟೆ?
ಇಂತೀ ಆತ್ಮನಲ್ಲಿ ಸರ್ವಭೂತ ಹಿತವುಳ್ಳಂಗೆಆತ ಅತೀತ ಸ್ವಯವಸ್ತು ದಸರೇಶ್ವರಲಿಂಗವು.
-ದಸರಯ್ಯ
Next Article