ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವಚನ-: --ದಾಸೋಹದ ಸಂಗಣ್ಣ

07:24 AM Aug 03, 2024 IST | BC Suddi
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.

ವಚನ:

ಮಣ್ಣಿನಲ್ಲಿ ಹುಟ್ಟಿದ ಹೊನ್ನು, ಕಲ್ಪಿನಲ್ಲಿ ಹುಟ್ಟಿದ ರನ್ನ,

ಚಿಪ್ಪಿನಲ್ಲಿ ಹುಟ್ಟಿದ ಮುತ್ತು, ವೃಕ್ಷದಲ್ಲಿ ಹುಟ್ಟಿದ ಗಂಧ

ಅವು ತಮ್ಮ ಸ್ವಸ್ಥಾನಂಗಳ ಮೀರಿ

ಪರಸ್ಥಾನಂಗಳಲ್ಲಿ ನಿಂದು ಪ್ರಾಪ್ತಿಯನೆಯ್ದುವಂತೆ,

ಪಿಂಡ ಅಂಡದಲ್ಲಿ ಹುಟ್ಟಿ ಅಂಡವನಿತಿಗಳೆದು ನಿಜ ಪಿಂಡವಾದಂತೆ,

ಗುರುವಿನ ಕರಕಮಲದಲ್ಲಿ ಹುಟ್ಟಿ,

ಲಿಂಗಮೂರ್ತಿಯ ಸರ್ವಾಂಗದಲ್ಲಿ ಬೆಳೆದು

ಜಂಗಮವಪ್ಪ ನಿರಂಗ ಪ್ರಸಾದದಲ್ಲಿ ಬೆರೆದು ಅವಿರಳನಾದವಂಗೆ

ಬಂಧ ಮೋಕ್ಷ ಕರ್ಮಂಗಳ ಬೆಂಬಳಿಗೆ ಸಲ್ಲ!

ಅದು ನಿರಂಗವಸ್ತು.

ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ,

ಮಾತುಳಂಗ ಮಧುಕೇಶ್ವರನು.

 

-ದಾಸೋಹದ ಸಂಗಣ್ಣ

Tags :
ವಚನ - ದಾಸೋಹದ ಸಂಗಣ್ಣ
Advertisement
Next Article