ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವಚನ-ಪ್ರಸಾದಿ ಭೋಗಣ್ಣ.!

08:11 AM Jul 24, 2024 IST | Bcsuddi
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.

ಭಕ್ತಿಯೆಂಬುದು ಬೇರು, ವಿರಕ್ತಿಯೆಂಬುದೆ ಮರ, ಫಲವೆಂಬುದೆ ಜ್ಞಾನ.

ಪಕ್ವಕ್ಕೆ ಬಂದಿತ್ತೆಂಬಾಗಲೆ ಅವಧಿಜ್ಞಾನ.

ತೊಟ್ಟು ಬಿಟ್ಟಲ್ಲಿಯೆ ಪರಮಜ್ಞಾನ.

ಸವಿದಲ್ಲಿಯೆ ಅಂತರೀಯಜ್ಞಾನ.

ಸುಖ ತನ್ಮಯವಾದಲ್ಲಿಯೆ ದಿವ್ಯಜ್ಞಾನ.

ದಿವ್ಯ ತೇಜಸ್ಸು ಹಿಂಗದಲ್ಲಿಯೆ ಪರಿಪೂರ್ಣಜ್ಞಾನ.

ಅದು ಮಹದೊಡಲೆಂಬುದಕ್ಕೆ ಎಡೆಯಿಲ್ಲ.

ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗವುಅಪ್ರಮಾಣಾದ ಕಾರಣ.

 

-ಪ್ರಸಾದಿ ಭೋಗಣ್ಣ

Tags :
ವಚನ- --ಪ್ರಸಾದಿ ಭೋಗಣ್ಣ
Advertisement
Next Article