For the best experience, open
https://m.bcsuddi.com
on your mobile browser.
Advertisement

-ಮಾದಾರ ಚೆನ್ನಯ್ಯ ಅವರ ವಚನ.!

07:52 AM Feb 10, 2024 IST | Bcsuddi
 ಮಾದಾರ ಚೆನ್ನಯ್ಯ ಅವರ ವಚನ
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

Advertisement

ವಚನ: :

ವೇದ ಶಾಸ್ತ್ರಕ್ಕೆ ಹಾರುವನಾಗಿ,

ವೀರ ವಿತರಣಕ್ಕೆ ಕ್ಷತ್ರಿಯನಾಗಿ,

ಸರ್ವವನಾರೈದು ನೋಡುವಲ್ಲಿ,

ವೈಶ್ಯನಾಗಿ ವ್ಯಾಪಾರದೊಳಗಾಗಿ,

ಕೃಷಿಯ ಮಾಡುವುದಕ್ಕೆ ಶೂದ್ರನಾಗಿ.

ಇಂತೀ ಜಾತಿಗೋತ್ರದೊಳಗಾದ ನೀಚ ಶ್ರೇಷ್ಠವೆಂಬ

ಎರಡು ಕುಲವಲ್ಲದೆ,

ಹೊಲೆ ಹದಿನೆಂಟುಜಾತಿಯೆಂಬ ಕುಲವಿಲ್ಲ.

ಬ್ರಹ್ಮವನರಿದಲ್ಲಿ ಬ್ರಾಹ್ಮಣ.

ಸರ್ವಜೀವಹತ ಕರ್ಮಕ್ಕೊಳಗಾಗಿದ್ದಲ್ಲಿ ಸಮಗಾರ.

ಈ ಉಭಯವನರಿದು ಮರೆಯಲಿಲ್ಲ.

ಕೈಯುಳಿ ಕತ್ತಿ ಅಡಿಗೂಂಟಕ್ಕಡಿಯಾಗಬೇಡ,

ಅರಿ ನಿಜಾ[ತ್ಮಾ] ರಾಮ ರಾಮನಾ.

-ಮಾದಾರ ಚೆನ್ನಯ್ಯ

Tags :
Author Image

Advertisement