ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವಚನ- ರಾಯಸದ ಮಂಚಣ್ಣ

07:35 AM Jun 20, 2024 IST | Bcsuddi
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ

ವಚನ: :

ಮರಾಳಂಗೆ ಹಾಲು ನೀರನೆರೆದಲ್ಲಿ

ನೀರನುಳುಹಿ ಹಾಲ ಕೊಂಬ ಭೇದವ ನೋಡಾ !

ಎಣ್ಣೆ ನೀರ ಕೂಡಿದಲ್ಲಿ ಅದು ತನ್ನಿಂದಲೆ ಬೆಳೆದು,

ಚೆನ್ನಾಗಿ ಉರಿಯದ ಭೇದವ ನೋಡಾ!

ಮಣ್ಣು ಹೊನ್ನಿನಲ್ಲಿ ಬೆಳೆದು, ತನ್ನ ತಪ್ಪಿಸಿಕೊಂಡು,

ಹೊನ್ನು ಬೆಲೆಯಾದ ಭೇದವ ನೋಡಾ !

ತನ್ನೊಳಗೆ ತಾನಿದು ತನ್ನನರಿಯದೆ,

ತೊಳಲುವ ಬಿನ್ನಾಣವ ನೋಡಾ !

ಚೆನ್ನಾಗಿ ನುಡಿವ ಅಣ್ಣಗಳ ಬಾಗಿಲಲ್ಲಿ ನಿಂದು,

ನಿಜವುಳ್ಳ ಅಣ್ಣಗಳ ಬಾಗಿಲಲ್ಲಿ ನಿಂದು, ಬಣ್ಣ ಗೆಟ್ಟವರ ಕಂಡು ಚುನ್ನವಾಡುತಿರ್ದ, ಜಾಂಬೇಶ್ವರಾ.

 

-ರಾಯಸದ ಮಂಚಣ್ಣ

Tags :
ವಚನ- ರಾಯಸದ ಮಂಚಣ್ಣ
Advertisement
Next Article