ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವಚನ:   -ಸಿದ್ಧರಾಮೇಶ್ವರ

07:10 AM Jun 11, 2024 IST | Bcsuddi
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ

ವಚನ: :

ಶಿಷ್ಯನಿಲ್ಲದಡೆ ಗುರು ಎಲ್ಲಿಹನಯ್ಯಾ?

ಪೂಜಕನಿಲ್ಲದಡೆ ಲಿಂಗವೆಲ್ಲಹುದಯ್ಯಾ?

ಭಕ್ತನಿಲ್ಲದಡೆ ಜಂಗಮವ್ಲೆಹನಯ್ಯಾ?

ಜಲವಿಲ್ಲದಡೆ ಪಾದೋದಕವೆಲ್ಲಹುದಯ್ಯಾ?

ಧೇನುವಿಲ್ಲದಡೆ ಭೂತಿಯೆಹುದಯ್ಯಾ?

ತ್ರೈಪುರವಿಲ್ಲದಡೆ ರುದ್ರಾಕ್ಷಿಗಳೆಲ್ಲಿಹವಯ್ಯಾ?

ವರ್ಣಂಗಳಿಲ್ಲದಡೆ ಮಂತ್ರಂಗಳೆಲ್ಲಿಹವಯ್ಯಾ?

ನಾನಿಲ್ಲದಡೆ ನೀನೆಲ್ಲಿಯವನಯ್ಯಾ?

ಇವೆಲ್ಲ ಭಾವಭ್ರಮೆಯಲ್ಲದೆ,

ನಿರ್ಭಾವ ನಿಜಾನಂದ ತೂರ್ಯಾತೀತ ಪರವಸ್ತುವಿನ ಕೂಟದಲ್ಲಿ

ಆನು ನೀನೆಂಬುಭಯ ಭಾವ ಇದ್ದಡೆ ತೋರ ಬಾರಾ,

ಮಾರಹರ ಧೀರ ಗಂಭೀರ ಕಪಿಲಸಿದ್ಧಮಲ್ಲಿಕಾರ್ಜುನವೀರ.

 

-ಸಿದ್ಧರಾಮೇಶ್ವರ

Tags :
ವಚನ:   -ಸಿದ್ಧರಾಮೇಶ್ವರ
Advertisement
Next Article