For the best experience, open
https://m.bcsuddi.com
on your mobile browser.
Advertisement

ವಯನಾಡು:ಗುಹೆಯಲ್ಲಿ ಸಿಲುಕಿದ್ದ ನಾಲ್ವರು ಮಕ್ಕಳ ರಕ್ಷಣೆ

06:13 PM Aug 03, 2024 IST | BC Suddi
ವಯನಾಡು ಗುಹೆಯಲ್ಲಿ ಸಿಲುಕಿದ್ದ ನಾಲ್ವರು ಮಕ್ಕಳ ರಕ್ಷಣೆ
Advertisement

ವಯನಾಡ್ ಭೂಕುಸಿತದ ನಂತರ ದಟ್ಟ ಅರಣ್ಯದಲ್ಲಿ ಗುಹೆಯೊಂದರಲ್ಲಿ ಸಿಲುಕಿಕೊಂಡಿದ್ದ ಬುಡಕಟ್ಟು ಸಮುದಾಯಕ್ಕೆ ಸೇರಿದ ನಾಲ್ವರು ಮಕ್ಕಳು ಹಾಗೂ ಅವರ
ಪೋಷಕರನ್ನು ಕೇರಳ ಅರಣ್ಯ ಇಲಾಖೆ ಅಧಿಕಾರಿಗಳು ರಕ್ಷಿಸಿದ್ದಾರೆ. ಕಲ್ಪೆಟ್ಟಾ ವ್ಯಾಪ್ತಿಯ ಅರಣ್ಯಾಧಿಕಾರಿ ಕೆ.ಹಶಿಸ್  ನೇತೃತ್ವದ ನಾಲ್ವರು ಸದಸ್ಯರ ತಂಡವು 1-4 ವರ್ಷದೊಳಗಿನ ನಾಲ್ಕು ಮಕ್ಕಳನ್ನು ಒಳಗೊಂಡ ಬುಡಕಟ್ಟು ಕುಟುಂಬವನ್ನು ರಕ್ಷಿಸಿದೆ.

ಈ ಕುಟುಂಬವು ವಯನಾಡಿನ ಪನಿಯಾ ಸಮುದಾಯದ್ದಾಗಿದ್ದು, ಬೆಟ್ಟದ ಮೇಲಿನ ಗುಹೆಯೊಂದರಲ್ಲಿ 5 ದಿನದಿಂದ ಆಹಾರವಿಲ್ಲದೆ ಸಿಕ್ಕಿ ಹಾಕಿಕೊಂಡಿದ್ದರು ಎಂದು ಹಶಿಸ್ ತಿಳಿಸಿದ್ದಾರೆ.

Advertisement
Author Image

Advertisement