ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'ವಯನಾಡ್ ಜನರಿಗೆ ನಾನು, ಪ್ರಿಯಾಂಕಾ ಇಬ್ಬರು ಸಂಸದರು ಸಿಗಲಿದ್ದಾರೆ'- ರಾಹುಲ್‌ ಭಾವುಕ ಮಾತು

09:43 AM Jun 18, 2024 IST | Bcsuddi
Advertisement

ನವದೆಹಲಿ: 2024ರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ವಯನಾಡ್‌ ಕ್ಷೇತ್ರವನ್ನು ಬಿಟ್ಟು ಸಂಸದ ರಾಹುಲ್‌ ಗಾಂಧಿರಾಯ್‌ ಬರೇಲಿ ಕ್ಷೇತ್ರವನ್ನು ಉಳಿಸಿಕೊಳ್ಳಲು ನಿರ್ಧರಿಸಿದ್ದಾರೆ. ದೆಹಲಿಯಲ್ಲಿ ನಡೆದ ಹೈಕಮಾಂಡ್‌ ಸಭೆಯ ಬಳಿಕ ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ.

Advertisement

ಸಭೆಯ ಬಳಿಕ ಮಾತನಾಡಿದ ರಾಹುಲ್‌, ವಯನಾಡ್ ಮತ್ತು ರಾಯ್ ಬರೇಲಿ ಜೊತೆಗೆ ಭಾವನಾತ್ಮಕ ಸಂಬಂಧ ಇದೆ. ವಯನಾಡ್ ನಲ್ಲಿ ಕಳೆದ 5 ವರ್ಷದಿಂದ ಸಂಸದನಿದ್ದೆ. ಅದಕ್ಕಾಗಿ ವಯನಾಡಿನ ಜನತೆಗೆ ತುಂಬು ಹೃದಯದ ಧನ್ಯವಾದ ಸಲ್ಲಿಸುತ್ತೇನೆ. ಜೀವನ ಪೂರ್ತಿ ಅವರನ್ನು ನೆನಪಿನಲ್ಲಿಟ್ಟುಕೊಳ್ಳುತ್ತೇನೆ. ಇನ್ನೂ ರಾಯ್ ಬರೇಲಿ ಜೊತೆಗೆ ಹಳೇ ಸಂಬಂಧವಿದ್ದು, ಮುಂದೆ ಅವರ ಜೊತೆಗಿರುತ್ತೇನೆ ಎಂಬ ಖುಷಿ ಇದೆ ಎಂದು ತಿಳಿಸಿದ್ದಾರೆ.

ವಯನಾಡ್‌ ಮತ್ತು ರಾಯ್‌ ಬರೇಲಿ ಕ್ಷೇತ್ರಗಳ ನಿರ್ಧಾರ ಕೈಗೊಳ್ಳುವುದು ಸುಲಭವಾಗಿರಲಿಲ್ಲ. ಕಳೆದ 5 ವರ್ಷಗಳಿಂದ ವಯನಾಡ್ ಸಂಸದನಾಗಿದ್ದು ಅದ್ಬುತವಾದ ಅನುಭವ. ಪ್ರತಿಯೊಂದು ಹಂತದಲ್ಲೂ ಇಲ್ಲಿನ ಜನ ಪ್ರೀತಿ, ಬೆಂಬಲ ನೀಡಿದರು. ಕಷ್ಟದ ಸಮಯದಲ್ಲಿ ಹೋರಾಡಲು ಶಕ್ತಿ ನೀಡಿದರು. ಉಪ ಚುನಾವಣೆಯಲ್ಲಿ ಪ್ರಿಯಾಂಕಾ ವಯನಾಡಿನಿಂದ ಸ್ಪರ್ಧಿಸುತ್ತಿದ್ದಾರೆ. ಪ್ರಿಯಾಂಕಾ ಅಲ್ಲಿ ಸ್ಪರ್ಧಿಸುತ್ತಿದ್ದಾರೆ, ನಾನು ನಿರಂತರ ಅಲ್ಲಿಗೆ ಭೇಟಿ ನೀಡುತ್ತೇನೆ. ಪ್ರಿಯಾಂಕಾ ವಯನಾಡ್ ನಿಂದ ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸ ನನಗಿದೆ ಎಂದರಲ್ಲದೇ ವಯನಾಡ್ ಜನರಿಗೆ ನಾನು, ಪ್ರಿಯಾಂಕಾ ಇಬ್ಬರು ಸಂಸದರು ಸಿಗಲಿದ್ದಾರೆ ಎಂದಿದ್ದಾರೆ.

ಬಳಿಕ ಪ್ರಿಯಾಂಕಾ ಗಾಂಧಿ ಮಾತನಾಡಿ, ರಾಯ್ ಬರೇಲಿ ಜೊತೆಗೆ ಉತ್ತಮ ಸಂಬಂಧ ಇದೆ. ಅಲ್ಲಿ ಸಾಕಷ್ಟು ಕೆಲಸ ಮಾಡಿದ್ದೇವೆ. ನಾವಿಬ್ಬರೂ ವಯನಾಡ್ ಮತ್ತು ರಾಯ್ ಬರೇಲಿ ಜೊತೆಗೆ ಇರಲಿದ್ದೇವೆ. ರಾಯ್‌ಬರೇಲಿ ನನ್ನ ಸಹೋದರನಿಗೆ ನೀಡಿದ್ದೇನೆ ಎಂದು ಭಾವುಕರಾಗಿದ್ದಾರೆ.ಪ್ರಸಕ್ತ ವರ್ಷದ ಲೋಕಸಭಾ ಚುನಾವಣೆಯಲ್ಲಿ ರಾಹುಲ್‌ ಗಾಂಧಿ ಸ್ಪರ್ಧಿಸಿದ್ದ ಎರಡೂ ಕ್ಷೇತ್ರಗಳಿಂದಲೂ ಭರ್ಜರಿ ಜಯ ಗಳಿಸಿದ್ದಾರೆ.

 

Advertisement
Next Article