ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವರದಕ್ಷಿಣೆ ಕಿರುಕುಳ ಆರೋಪ - ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

04:09 PM Aug 25, 2024 IST | BC Suddi
Advertisement

ಕೋಲಾರ:ಕೌಟುಂಬಿಕ ಕಲಹದಿಂದ ಸಹಕಾರ ನಗರದ ನಿವಾಸಿ ನವವಿವಾಹಿತೆ ಮಾನಸ (24) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಒಂದು ವರ್ಷದ ಹಿಂದೆ ತಾಲೂಕಿನ ತೂರಾಂಡಹಳ್ಳಿಯ ಉಲ್ಲಾಸ್ ಗೌಡ ಮತ್ತು ಮಾನಸ ವಿವಾಹವಾಗಿದ್ದರು.

Advertisement

ಉಲ್ಲಾಸ್ ಗೌಡ ಕುಟುಂಬಸ್ಥರು ಮಾನಸಳಿಗೆ ವರದಕ್ಷಿಣೆ ವಿಚಾರವಾಗಿ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದರು ಎಂದು ಹೇಳಲಾಗಿದೆ. ರಾಜಿ ಸಂಧಾನ ಸಫಲವಾಗದ ಹಿನ್ನೆಲೆ, ವಿಚ್ಛೇದನಕ್ಕೆ ಅರ್ಜಿ ಹಾಕಿಕೊಳ್ಳಲಾಗಿತ್ತು. ಪರಿಣಾಮ ಉಲ್ಲಾಸ್ ಗೌಡ ತನ್ನ ಪತ್ನಿ ಮಾನಸಳನ್ನು ತವರು ಮನೆಗೆ ಕಳುಹಿಸಿದ್ದ.

ನಂತರ ಉಲ್ಲಾಸ್ ಗೌಡ ವಿಚ್ಛೇದನ ಪಡೆದುಕೊಳ್ಳುವ ಉದ್ದೇಶದಿಂದ ವಕೀಲರ ಕಡೆಯಿಂದ ಪತ್ನಿಯ ಮನೆಗೆ ನೋಟಿಸ್ ಕಳುಹಿಸಿದ್ದ. ಇದರಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮಾನಸ ಕುಟುಂಬಸ್ಥರು ಆರೋಪಿಸಿದ್ದಾರೆ.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

 

Advertisement
Next Article