For the best experience, open
https://m.bcsuddi.com
on your mobile browser.
Advertisement

ವಾಯುಭಾರ ಕುಸಿತ: ರಾಜ್ಯದಲ್ಲಿ ಮತ್ತಷ್ಟು ಮುಂಗಾರು ಚುರುಕು

10:28 AM Jul 17, 2024 IST | Bcsuddi
ವಾಯುಭಾರ ಕುಸಿತ  ರಾಜ್ಯದಲ್ಲಿ ಮತ್ತಷ್ಟು ಮುಂಗಾರು ಚುರುಕು
Advertisement

ಬೆಂಗಳೂರು: ಅರಬ್ಬೀ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಇಂದು ಮತ್ತು ನಾಳೆ ಭಾರಿ ಮಳೆಯ ಮುನ್ಸೂಚನೆ ರಾಜ್ಯ ಹವಮಾನ ಇಲಾಖೆಯಿಂದ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜುಲೈ 19ರಿಂದ ಕರಾವಳಿ ಜಿಲ್ಲೆಗಳು ಹಾಗೂ ಚಿಕ್ಕಮಗಳೂರು ಶಿವಮೊಗ್ಗ, ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

Author Image

Advertisement