For the best experience, open
https://m.bcsuddi.com
on your mobile browser.
Advertisement

ವಿಶ್ವಕಪ್ ಗೆದ್ದ ತಂಡಕ್ಕೆ ಅಭಿನಂದನೆ - ನಮ್ಮವರ ಆಟವೂ ಬಹುಕಾಲ ನೆನಪಿನಲ್ಲಿ ಉಳಿಯುವಂಥದ್ದು ಸಿಎಂ ಸಿದ್ದರಾಮಯ್ಯ

12:01 PM Nov 20, 2023 IST | Bcsuddi
ವಿಶ್ವಕಪ್ ಗೆದ್ದ ತಂಡಕ್ಕೆ ಅಭಿನಂದನೆ   ನಮ್ಮವರ ಆಟವೂ ಬಹುಕಾಲ ನೆನಪಿನಲ್ಲಿ ಉಳಿಯುವಂಥದ್ದು ಸಿಎಂ ಸಿದ್ದರಾಮಯ್ಯ
Advertisement

ಬೆಂಗಳೂರು : ಗುಜರಾತ್ ನ ಅಹಮದಾಬಾದ್ ನಗರದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಣ ವಿಶ್ವಕಪ್ ಪಂದ್ಯದ ಅಂತಿಮ ಹಣಾಹಣಿಯಲ್ಲಿ ಉತ್ತಮ ಜೊತೆಯಾಟದೊಂದಿಗೆ ಟ್ರೋಫಿ ಗೆದ್ದುಕೊಂಡ ಆಸ್ಟ್ರೇಲಿಯಾ ಆಟಗಾರರಿಗೆ ಅಭಿನಂದನೆಗಳು ಅಂತಾ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣ 'ಎಕ್ಸ್' ನಲ್ಲಿ ಈ ಕುರಿತು ಪೋಸ್ಟ್ ಮಾಡಿದ ಸಿಎಂ, ಟೀಂ ಇಂಡಿಯಾ ತಂಡದ ಆಟಗಾರರೂ ಒಳ್ಳೆಯ ಪ್ರಯತ್ನ ನಡೆಸಿದರು. ಆದರೆ, ಆಟದಲ್ಲಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕಾಗುತ್ತೆ‌. ನಮ್ಮವರ ಆಟವೂ ಬಹುಕಾಲ ನೆನಪಿನಲ್ಲಿ ಉಳಿಯುವಂತಿತ್ತು. ಸೋಲಿನ ದುಃಖದಲ್ಲಿರುವ ನಮ್ಮ ತಂಡದ ಜೊತೆ ನಿಲ್ಲೋಣ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Author Image

Advertisement