For the best experience, open
https://m.bcsuddi.com
on your mobile browser.
Advertisement

--- -ವೀರ ಗೊಲ್ಲಾಳ/ಕಾಟಕೋಟ ಅವರ ವಚನ

07:11 AM Nov 08, 2023 IST | Bcsuddi
     ವೀರ ಗೊಲ್ಲಾಳ ಕಾಟಕೋಟ ಅವರ ವಚನ
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಕಲ್ಲು ಲಿಂಗವಲ್ಲ, ಉಳಿಯ ಮೊನೆಯಲ್ಲಿ ಒಡೆಯಿತ್ತು.

ಮರ ದೇವರಲ್ಲ, ಉರಿಯಲ್ಲಿ ಬೆಂದಿತ್ತು.

ಮಣ್ಣು ದೇವರಲ್ಲ, ನೀರಿನ ಕೊನೆಯಲ್ಲಿ ಕದಡಿತ್ತು.

ಇಂತಿವನೆಲ್ಲವನರಿವ ಚಿತ್ತ ದೇವರಲ್ಲ.

ಕರಣಂಗಳ ಮೊತ್ತದೊಳಗಾಗಿ ಸತ್ವಗೆಟ್ಟಿತ್ತು.

ಇಂತಿವ ಕಳೆದುಳಿದ ವಸ್ತುವಿಪ್ಪೆಡೆ ಯಾವುದೆಂದಡೆ :

ಕಂಡವರೊಳಗೆ ಕೈಕೊಂಡಾಡದೆ,

ಕೊಂಡ ವ್ರತದಲ್ಲಿ ಮತ್ತೊಂದನೊಡಗೂಡಿ ಬೆರೆಯದೆ,

ವಿಶ್ವಾಸ ಗ್ರಹಿಸಿ ನಿಂದಲ್ಲಿ ಆ ನಿಜಲಿಂಗವಲ್ಲದೆ,

ಮತ್ತೊಂದು ಪೆರತನರಿಯದೆ ನಿಂದಾತನೆ ಸರ್ವಾಂಗಲಿಂಗಿ,

ವೀರಬೀರೇಶ್ವರಲಿಂಗದೊಳಗಾದ ಶರಣ.

-ವೀರ ಗೊಲ್ಲಾಳ/ಕಾಟಕೋಟ

Tags :
Author Image

Advertisement