ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿರುವುದರ ಹಿಂದೆ ಹೈ ಲೆವೆಲ್ ಉಗ್ರರ ಕೈವಾಡವಿದೆ' - ಆರ್​.ಅಶೋಕ್

04:26 PM Dec 01, 2023 IST | Bcsuddi
Advertisement

ಬೆಂಗಳೂರು: ಬೆಂಗಳೂರಿನಲ್ಲಿ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿರುವುದರ ಹಿಂದೆ ಹೈಲೆವೆಲ್ ಉಗ್ರರ ಕೈವಾಡ ಇದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.

Advertisement

15ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿದ ವಿಚಾರವಾಗಿ ಮಾತನಾಡಿದ ಅವರು, ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ​ ಜತೆ ಮಾತನಾಡಿದ್ದೇನೆ. ಅಲ್ಲಾಗೆ ಮೋಸ ಮಾಡುತ್ತಿದ್ದಾರೆಂದು ಇ-ಮೇಲ್ ಪತ್ರದಲ್ಲಿ​ ಉಲ್ಲೇಖವಾಗಿದೆ. ಧರ್ಮಾಧರಿತವಾಗಿ ಬಾಂಬ್ ಬೆದರಿಕೆ ಹಾಕಿದ್ದಾರೆ. ಬಾಂಬ್ ಬೆದರಿಕೆ ಹಿಂದೆ ದೊಡ್ಡ ಜಾಲ ಇರುವ ಬಗ್ಗೆ ಗೊತ್ತಾಗುತ್ತಿದೆ. ಉಗ್ರವಾದ ಅರ್ಥದಲ್ಲಿ ಇ-ಮೇಲ್ ಬಾಂಬ್ ಬೆದರಿಕೆ ಹಾಕಿದ್ದಾರೆ ಎಂದರು.

ಇನ್ನು ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು. ಇಲ್ಲಿ ಬಾಂಬ್ ಸ್ಕ್ವಾಡ್, ಡಾಗ್ ಸ್ಕ್ವಾಡ್ ಬಂದಿದೆ. ಇಲ್ಲಿವರೆಗೇ ಏನೂ ಸಿಕ್ಕಿಲ್ಲ. ಸದ್ಯ 15 ಶಾಲೆಗಳಿಗೆ ಮೇಲ್ ಬಂದಿದೆ ಎಂದು ತಿಳಿಸಿದ್ದಾರೆ.

Advertisement
Next Article