ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಶಾಸಕರು, ಕಾರ್ಯಕರ್ತರಿಗೆ ಅಧಿಕಾರ ಶೀಘ್ರ ನಿರ್ಧಾರ: ಡಿ.ಕೆ. ಶಿವಕುಮಾರ್

11:11 AM Nov 22, 2023 IST | Bcsuddi
Advertisement

ಬೆಂಗಳೂರು: ಪಕ್ಷದ ಸಂಘಟನೆ, ನಿಗಮ ಮಂಡಳಿ ನೇಮಕ ಸೇರಿದಂತೆ ಶಾಸಕರು ಹಾಗೂ ಕಾರ್ಯಕರ್ತರಿಗೆ ಅಧಿಕಾರ ನೀಡುವ ಬಗ್ಗೆ ನಮ್ಮ ನಾಯಕರ ಜೊತೆ ಚರ್ಚೆ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

Advertisement

ಶಾಸಕರು, ಕಾರ್ಯಕರ್ತರಿಗೆ ಅಧಿಕಾರ ಸಂಬಂಧ ಸಭೆ ನಂತರ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ ನೀಡಿ ಮಾತನಾಡಿ, ಶಾಸಕರಿಗೆ ಜವಾಬ್ದಾರಿ ನೀಡುವ ಬಗ್ಗೆ ಮೊದಲ ಸುತ್ತಿನ ಚರ್ಚೆ ಆಗಿದ್ದು, ಈಗಿನ ಪಟ್ಟಿಯನ್ನು ಕೇಂದ್ರ ನಾಯಕರು ಪರಿಶೀಲಿಸಲಿದ್ದಾರೆ. ನಂತರ ಎರಡನೇ ಸುತ್ತಿನ ಚರ್ಚೆ ಆಗಲಿದೆ ಎಂದರು

ಪಂಚರಾಜ್ಯ ಚುನಾವಣೆ ನಡೆಯುತ್ತಿದ್ದು, ಮುಖ್ಯಮಂತ್ರಿಗಳು ಹಾಗೂ ನಾನು ಪ್ರಚಾರಕ್ಕೆ ಹೋಗಬೇಕಿದೆ. ಆದಷ್ಟು ಬೇಗ ಈ ಪ್ರಕ್ರಿಯೆ ಮಾಡುತ್ತೇವೆ" ಎಂದು ಇದೇ ವೇಳೆ ತಿಳಿಸಿದರು

ಗೃಹಸಚಿವರು ಮುನಿಸಿಕೊಂಡಿದ್ದಾರೆ ಎಂಬ ಬಗ್ಗೆ ಚರ್ಚೆ ಆಗುತ್ತಿದೆಯಲ್ಲ ಎಂದು ಕೇಳಿದಾಗ, "ಗೃಹಸಚಿವರು ಕೂಡ ಈ ಸಭೆಯಲ್ಲಿ ಭಾಗವಹಿಸಿದ್ದರು. ಬೆಳಗಾವಿಯಿಂದ ಬಂದು ಚರ್ಚೆ ಮಾಡಿದ್ದಾರೆ. ಯಾರು ಯಾಕೆ ಮುನಿಸಿಕೊಳ್ಳುತ್ತಾರೆ" ಎಂದು ಕೇಳಿದರು.

ಲೋಕಸಭೆ ಚುನಾವಣೆ ಸಂಬಂಧದ ವರದಿ ಬಗ್ಗೆ ಕೇಳಿದಾಗ, "ಕೆಲವರು ತಮ್ಮ ವರದಿ ನೀಡಿದ್ದು, ಮತ್ತೆ ಕೆಲವರು ಇನ್ನಷ್ಟೇ ನೀಡಬೇಕಿದೆ" ಎಂದು ತಿಳಿಸಿದರು.

Advertisement
Next Article