ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಶಿರೂರು ಗುಡ್ಡ ಕುಸಿತ; ಮೂರನೇ ಹಂತದ ಕಾರ್ಯಾಚರಣೆ ವೇಳೆ ಸಿಕ್ಕಿತು ಮೂಳೆ..!

01:36 PM Sep 23, 2024 IST | BC Suddi
Advertisement

ಅಂಕೋಲಾ: ಶಿರೂರು ಗುಡ್ಡ ಕುಸಿತದ ಮೂರನೇ ಹಂತದ ಮೂರನೇ ದಿನದ ಶೋಧ ಕಾರ್ಯಾಚರಣೆ ವೇಳೆ ಮೂಳೆಯೊಂದು ಸಿಕ್ಕಿದೆ.

Advertisement

ಗಂಗಾವಳಿ ನದಿಯ ಆಳದಿಂದ ಮೇಲೆತ್ತಲಾದ ಮಣ್ಣು ರಾಶಿಯಲ್ಲಿ ಮೂಳೆಯ ತುಂಡೊಂದು ಪತ್ತೆಯಾಗಿದ್ದು, ಇದು ಜುಲೈ 16 ರಂದು ನಡೆದ ದುರ್ಘಟನೆಯಲ್ಲಿ ಕಣ್ಮರೆಯಾಗಿ ಇದುವರೆಗೂ ಪತ್ತೆಯಾಗದ ಮೂವರಲ್ಲಿ ಯಾರದಾದರೂ ಆಗಿರಬಹುದೇ ಎಂಬ ಜಿಜ್ಞಾಸೆ ಆರಂಭವಾಗಿದೆ. ಇದು ಮನುಷ್ಯರ ಮೂಳೆಯೇ ಅಥವಾ ಯಾವುದೋ ಪ್ರಾಣಿಯ ಮೂಳೆಯೇ ಎನ್ನುವ ಪ್ರಶ್ನೆಯೂ ಕಾಡಲಾರಂಭಿಸಿದ.

ಶಿರೂರು ದುರಂತದಲ್ಲಿ ಕಣ್ಮರೆಯಾಗಿರುವ ಶಿರೂರಿನ ಜಗನ್ನಾಥ ನಾಯ್ಕ, ಲೋಕೇಶ ನಾಯ್ಕ, ಮತ್ತು ಕೇರಳದ ಲಾರಿ ಚಾಲಕ ಅರ್ಜುನ್ ಅವರ ಮೃತದೇಹಗಳು ಘಟನೆ ಸಂಭವಿಸಿ ಎರಡು ತಿಂಗಳು ಕಳೆದರೂ ಪತ್ತೆಯಾಗಿಲ್ಲ. ಕಣ್ಮರೆಯಾದವರ ಎಲುಬಿನ ತುಂಡಾದರೂ ಸಿಕ್ಕರೆ ಸಂಸ್ಕಾರ ಕಾರ್ಯ ನಡೆಸುವ ನಿರೀಕ್ಷೆಯಲ್ಲಿ ಅವರ ಕುಟುಂಬದವರಿದ್ದಾರೆ.

ಹೀಗಾಗಿ ಪ್ರತಿದಿನ ಶೋಧ ಕಾರ್ಯಾಚರಣೆ ಸ್ಥಳದಲ್ಲಿ ಕುಟುಂಬದವರು ಹಾಜರಿರುವುದು ಕಂಡುಬರುತ್ತಿದೆ. ವೈಜ್ಞಾನಿಕ ಪರೀಕ್ಷೆ ಬಳಿಕವೇ ಈ ಮೂಳೆಯ ಕುರಿತು ನಿಖರವಾದ ಮಾಹಿತಿ ಸಿಗಲಿದೆ.

Advertisement
Next Article