ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಶಿರೂರು ದೋಣಿ ಮಗುಚಿ ಮೀನುಗಾರರ ಸಾವು: ಸಚಿವೆ ಹೆಬ್ಬಾಳಕರ್ ಸಂತಾಪ, ಪರಿಹಾರ ಘೋಷಣೆ

10:45 AM Dec 18, 2023 IST | Bcsuddi
Advertisement

ಬೆಳಗಾವಿ: ಶಿರೂರು ಸಮೀಪ ಅರಬ್ಬಿ ಸಮುದ್ರದಲ್ಲಿ ದೋಣಿ ಮಗುಚಿ ಇಬ್ಬರು ಮೀನುಗಾರರು ಮೃತಪಟ್ಟಿರುವುದಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರೂ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಲಕ್ಷ್ಮೀ ಹೆಬ್ಬಾಳಕರ್, ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

Advertisement

ನವದೆಹಲಿ ಪ್ರವಾಸದಲ್ಲಿರುವ ಸಚಿವರು, ಘಟನೆ ಕುರಿತಂತೆ ಜಿಲ್ಲೆಯ ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿ ಸಂಪೂರ್ಣ ಮಾಹಿತಿ ಪಡೆದಿದ್ದಾರೆ. ಮೃತರ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳುವಂತೆ ಮತ್ತು ಆದಷ್ಟು ಬೇಗ ಸೂಕ್ತ ಪರಿಹಾರ ನೀಡಲು ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Advertisement
Next Article