ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಶೀಘ್ರದಲ್ಲೇ ಬಿಜೆಪಿಗರ ಹಗರಣ ಬಯಲಿಗೆ: ಸಿದ್ದರಾಮಯ್ಯ.!

08:18 AM Aug 04, 2024 IST | BC Suddi
Advertisement

 

Advertisement

ಬೆಂಗಳೂರು:  ಬಿಜೆಪಿಗರ ಹಗರಣವನ್ನು ಶೀಘ್ರದಲ್ಲೇ ಬಯಲು ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿ – ಜೆಡಿಎಸ್ ನಾಯಕರಿಗೆ ಇಲ್ಲ. ಅವರದೇ ಹಗರಣಗಳ ರಾಶಿ ಬಿದ್ದಿದೆ, ಅವೆಲ್ಲವನ್ನೂ ಆದಷ್ಟು ಶೀಘ್ರದಲ್ಲಿ ಹೊರತಂದು ಅವರ ಬಂಡವಾಳ ಬಯಲು ಮಾಡುತ್ತೇವೆ ಎಂದು ಹೇಳಿದ್ದಾರೆ.

ಹಗರಣವೇ ಅಲ್ಲದ ಮುಡಾ ವಿಚಾರವನ್ನು ಬಿಜೆಪಿ – ಜೆಡಿಎಸ್ ನಾಯಕರು ದೊಡ್ಡ ಹಗರಣವೆಂಬಂತೆ ಬಿಂಬಿಸಿ, ಆ ಮೂಲಕ ನಮ್ಮ ಸರ್ಕಾರವನ್ನು ಹೇಗೆ ಅಸ್ಥಿರಗೊಳಿಸಲು ಹೊಂಚು ಹಾಕಿದ್ದಾರೆ ಎಂಬುದನ್ನು ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ಪಕ್ಷದ ಹಿರಿಯ ನಾಯಕರಾದ ವಿ.ಎಸ್. ಉಗ್ರಪ್ಪ ಅವರು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ನೀವೊಮ್ಮೆ ಅವರ ಮಾತುಗಳನ್ನು ಕೇಳಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

 

Tags :
ಶೀಘ್ರದಲ್ಲೇ
Advertisement
Next Article