For the best experience, open
https://m.bcsuddi.com
on your mobile browser.
Advertisement

ಶೌಚಾಲಯದ ಗುಂಡಿ ಸ್ವಚ್ಛ ಮಾಡಿಸಿದ ಪ್ರಕರಣ: ಪ್ರಾಂಶುಪಾಲರು ಸೇರಿ ಇಬ್ಬರ ಬಂಧನ

08:53 AM Dec 18, 2023 IST | Bcsuddi
ಶೌಚಾಲಯದ ಗುಂಡಿ ಸ್ವಚ್ಛ ಮಾಡಿಸಿದ ಪ್ರಕರಣ  ಪ್ರಾಂಶುಪಾಲರು ಸೇರಿ ಇಬ್ಬರ ಬಂಧನ
Advertisement

ಕೋಲಾರ: ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಯಲುವಳ್ಳಿ ಬಳಿಯ ಶಾಲೆ ಮೊರಾರ್ಜಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯದ ಗುಂಡಿ ಸ್ವಚ್ಛ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಪ್ರಾಂಶುಪಾಲರು ಸೇರಿ ಇಬ್ಬರನ್ನು ಮಾಸ್ತಿ ಪೊಲೀಸ್‌ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಪ್ರಾಂಶುಪಾಲೆ ಭಾರತಮ್ಮ, ಸಹ ಶಿಕ್ಷಕ ಮುನಿಯಪ್ಪ ಬಂಧಿತರು. ಹಾಸ್ಟೆಲ್ ವಾರ್ಡನ್ ಮಂಜುನಾಥ್ ಮತ್ತು ಅತಿಥಿ ಶಿಕ್ಷಕ ಅಭಿಷೇಕ್‌ ಪರಾರಿ ಆಗಿದ್ದು, ಹುಡುಕಾಟ ನಡೆಸುತ್ತಿದ್ದಾರೆ.

ಕಳೆದ ಹಲವು ದಿನಗಳಿಂದ ಮಕ್ಕಳಿಗೆ ವಿವಿಧ ರೀತಿಯಲ್ಲಿ ಕಿರುಕುಳ ಕೂಡ ನೀಡಲಾಗುತ್ತಿದೆ ಅಂತಾ ಪ್ರಾಂಶುಪಾಲೆ ಭಾರತಮ್ಮ, ಶಿಕ್ಷಕ ಅಭಿಷೇಕ್, ಹಾಗೂ ವಾರ್ಡನ್ ಮಂಜುನಾಥ್ ಸೇರಿ ಕೆಲವು ಶಿಕ್ಷಕರ ವಿರುದ್ಧ ಆರೋಪ ಕೇಳಿಬಂದಿದ್ದು. ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್ ದೂರು ಹಿನ್ನೆಲೆ ಮಲಹೊರುವ ಪದ್ಧತಿ ನಿಯಂತ್ರಣ ಕಾಯ್ದೆ, ಅಟ್ರಾಸಿಟಿ ಕಾಯ್ದೆಯಡಿ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.

Advertisement

Author Image

Advertisement