ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಶ್ರೀ ಚರಣ್ ಸೌಹಾರ್ದ ಕೋ ಅಪರೇಟೀವ್ ಬ್ಯಾಂಕ್ ನ ಕೊಡಿಗೆಹಳ್ಳಿ ಶಾಖೆ ಮೇ 27 ರಂದು ಶುಭಾರಂಭ

03:41 PM May 25, 2024 IST | Bcsuddi
Advertisement

ಬೆಂಗಳೂರು; ಸಹಕಾರಿ ರಂಗದಲ್ಲಿ ಮಹತ್ವದ ಹೆಗ್ಗುರುತುಗಳನ್ನು ಮೂಡಿಸುತ್ತಿರುವ ಶ್ರೀ ಚರಣ್ ಸೌಹಾರ್ದ ಕೋ ಆಪರೇಟೀವ್ ಬ್ಯಾಂಕ್ ನ 10 ನೇ ಶಾಖೆ ಸಹಕಾರಿ ನಗರ ಸಮೀಪದ ಕೊಡಿಗೆ ಹಳ್ಳಿಯಲ್ಲಿ ಮೇ 27 ರಂದು ಕಾರ್ಯಾರಂಭ ಮಾಡಲಿದೆ ಎಂದು ಬ್ಯಾಂಕ್ ಸಂಸ್ಥಾಪಕ ಅಧ್ಯಕ್ಷ ಬಿ.ವಿ. ದ್ವಾರಕಾನಾಥ್ ಹೇಳಿದ್ದಾರೆ.

Advertisement

ಇದೇ 27 ರಂದು ರಾಜ್ಯ ಹೈಕೋರ್ಟ್ ನ ನಿವೃತ್ತ ಮುಖ್ಯ ನ್ಯಾಯಾಧೀಶರಾದ ಪಿ.ಎಸ್. ದಿನೇಶ್ ಕುಮಾರ್ ನೂತನ ಶಾಖೆಯನ್ನು ಶುಭಾರಂಭ ಮಾಡಲಿದ್ದಾರೆ. ಹಿರಿಯ ಪತ್ರಕರ್ತ, ಪಬ್ಲಿಕ್ ಟಿವಿ ಮುಖ್ಯಸ್ಥರಾದ ಹೆಚ್.ಆರ್. ರಂಗನಾಥ್ ಮತ್ತಿತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗಹಿಸಲಿದ್ದಾರೆ ಎಂದರು.

ಸಹಕಾರಿ ವಲಯದಲ್ಲಿ ಕಾಲು ಶತಮಾನಗಳ ಹಾದಿ ಸವೆಸಿರುವ ಶ್ರೀ ಚರಣ್ ಸೌಹಾರ್ದ ಕೋ ಆಪರೇಟೀವ್ ಬ್ಯಾಂಕ್ ಇದೀಗ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುತ್ತಿದೆ. ಈ ಮೂಲಕ ನಗರದಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲು ಸ್ಥಾಪಿಸಲಿದೆ ಎಂದು ಹೇಳಿದರು.
ತಮಗೆ ಸಹಕಾರಿ ವಲಯದಲ್ಲಿ ಐದು ದಶಕಗಳ ಅನುಭವವಿದ್ದು, ಇದನ್ನು ಬ್ಯಾಂಕ್ ಬೆಳವಣಿಗೆಗೆ ಬಳಸಿಕೊಳ್ಳಲಾಗುವುದು. ಶ್ರೀ ಚರಣ್ ಕೋ ಅಪರೇಟೀವ್ ಬ್ಯಾಂಕ್ ಅನ್ನು ಸಹಕಾರಿ ವಯದಲ್ಲಿ ನಂಬರ್ ಒನ್ ಸ್ಥಾನಕ್ಕೆ ಕೊಂಡೊಯ್ಯುವುದು ತಮ್ಮ ಮಹತ್ವಾಕಾಂಕ್ಷೆಯ ಗುರಿಯಾಗಿದೆ ಎಂದು ಬಿ.ವಿ. ದ್ವಾರಕಾನಾಥ್ ತಿಳಿಸಿದರು.

Advertisement
Next Article