ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಸಂತ್ರಸ್ತೆ ಎದುರು ರೇವಣ್ಣ ನಿವಾಸದಲ್ಲಿ ಮಹಜರು ನಡೆಸಿದ ಎಸ್ಐಟಿ

01:51 PM May 06, 2024 IST | Bcsuddi
Advertisement

ಬೆಂಗಳೂರು: ಹೆಚ್‌ಡಿ ರೇವಣ್ಣ ಹಾಗೂ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ದೂರು ನೀಡಿದ್ದ ಸಂತ್ರಸ್ತೆಯನ್ನು ಇಂದು ಬಸವನಗುಡಿಯಲ್ಲಿರುವ ರೇವಣ್ಣ ನಿವಾಸಕ್ಕೆ ಕರೆತಂದು ವಿಶೇಷ ತನಿಖಾ ದಳ(ಎಸ್ಐಟಿ) ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ.

Advertisement

ರೇವಣ್ಣ ನಿವಾಸಕ್ಕೆ ನಾಲ್ವರು ಮಹಿಳಾ ಅಧಿಕಾರಿಗಳು ಸೇರಿ ಆರು ಮಂದಿ ಅಧಿಕಾರಿಗಳ ತಂಡದೊಂದಿಗೆ ಸಂತ್ರಸ್ತೆ ಆಗಮಿಸಿದ್ದಾರೆ. ಈ ವೇಳೆ ಸಂತ್ರಸ್ತೆಯ ಹೇಳಿಕೆ, ಮಹಜರು ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಚಿತ್ರೀಕರಣ ಮಾಡಲಾಯಿತು.

ಮಹಜರು ಪ್ರಕ್ರಿಯೆ ನಡೆಸುವ ಮೊದಲು ಮುಂಜಾಗ್ರತಾ ಕ್ರಮವಾಗಿ ರೇವಣ್ಣ ನಿವಾಸಕ್ಕೆ ಬ್ಯಾರಿಕೇಡ್‌ ಹಾಕಲಾಗಿತ್ತು. ಇನ್ನು ಬಸವನಗುಡಿ ಪೊಲೀಸರು ರೇವಣ್ಣ ನಿವಾಸದ ಬಳಿ ಬಿಗಿಭದ್ರತೆ ಏರ್ಪಡಿಸಿದ್ದರು.

Advertisement
Next Article