For the best experience, open
https://m.bcsuddi.com
on your mobile browser.
Advertisement

'ಸಂವಿಧಾನ ಬದಲಾವಣೆ ಆದರೆ ನನ್ನ ತಲೆ ಕತ್ತರಿಸಿ ರಾಮಲಿಂಗೇಶ್ವರನಿಗೆ ಅರ್ಪಿಸಿ'- ಬಿಜೆಪಿ ಶಾಸಕ

11:12 AM May 03, 2024 IST | Bcsuddi
 ಸಂವಿಧಾನ ಬದಲಾವಣೆ ಆದರೆ ನನ್ನ ತಲೆ ಕತ್ತರಿಸಿ ರಾಮಲಿಂಗೇಶ್ವರನಿಗೆ ಅರ್ಪಿಸಿ   ಬಿಜೆಪಿ ಶಾಸಕ
Advertisement

ರಾಯಚೂರು: ನಮ್ಮ ‌ಬಿಜೆಪಿ ಸರ್ಕಾರ ಸಂವಿಧಾನ ಮುಟ್ಟುವುದಿಲ್ಲ. ಸಂವಿಧಾನ ಬದಲಾವಣೆ ಮಾಡುವುದಿಲ್ಲ. ಸಂವಿಧಾನ ಬದಲಾವಣೆಯಾದರೆ ನನ್ನ ತಲೆ ಕತ್ತರಿಸಿ ರಾಮಲಿಂಗೇಶ್ವರನಿಗೆ ಅರ್ಪಿಸಿ ಎಂದು ಬಿಜೆಪಿ ಶಾಸಕ ಡಾ. ಶಿವರಾಜ್ ಪಾಟೀಲ್ ತಿಳಿಸಿದ್ದಾರೆ.

ಬಿಜೆಪಿ ಅಧಿಕಾರಕ್ಕೇರಿದರೆ ಸಂವಿಧಾನ ಬದಲಾವಣೆ ಮಾಡುತ್ತಾರೆಂಬ ಕಾಂಗ್ರೆಸ್ ನಾಯಕರು ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ, ನಮ್ಮ ‌ಬಿಜೆಪಿ ಸರ್ಕಾರ ಸಂವಿಧಾನ ಮುಟ್ಟುವುದಿಲ್ಲ. ನಮ್ಮ ಪಕ್ಷದ ಒಬ್ಬ ನಾಯಕರು ಕೂಡ ಸಂವಿಧಾನ ಬದಲಾವಣೆ ಮಾಡಲ್ಲ. ಕಾಂಗ್ರೆಸ್ ನವರು ಬರೀ ಸುಳ್ಳು ಹೇಳುತ್ತಿದ್ದಾರೆ. ಬಿಜೆಪಿ ಅಧಿಕಾರಕ್ಕೆ ‌ಬಂದರೆ ನಿಮ್ಮನ್ನು ದೇಶದಲ್ಲಿರಲು ಬಿಡಲ್ಲ ಎಂದು ಕಾಂಗ್ರೆಸ್ ಮುಸ್ಲಿಮರಿಗೆ ಹೆದರಿಸುತ್ತಿದೆ ಎಂದು ಹೇಳಿದರು.

ಇನ್ನು ಪ್ರಧಾನಿ ಮೋದಿಯವರು ಕಳೆದ 10 ವರ್ಷದಿಂದ ಆಡಳಿತ ನಡೆಸುತ್ತಿದ್ದಾರೆ. ಸಂವಿಧಾನ ‌ಬದಲಾವಣೆ ಮಾಡಿದ್ದಾರಾ? ಕಾಂಗ್ರೆಸ್ನವರು ಅಪಪ್ರಚಾರ ಮಾಡುತ್ತಿದ್ದು, ಇದಕ್ಕೆ ಯಾರು ಕಿವಿಗೊಡಬಾರದು ಎಂದರು.

Advertisement

Author Image

Advertisement