ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಸಂಸದ ಡಾ. ಕೆ. ಸುಧಾಕರ್‌ಗೆ ಕೇಂದ್ರದಲ್ಲಿ ಮಹತ್ವದ ಜವಾಬ್ದಾರಿ..!

11:52 AM Sep 28, 2024 IST | BC Suddi
Advertisement

ಚಿಕ್ಕಬಳಾಪುರ: ಸಂಸದ ಡಾ.ಕೆ.ಸುಧಾಕರ್‌ಗೆ ಕೇಂದ್ರ ಹಣಕಾಸು ಸಂಸದೀಯ ಸ್ಥಾಯಿ ಸಮಿತಿಯ ಸದಸ್ಯರನ್ನಾಗಿ ನೇಮಿಸಲಾಗಿದೆ. ಮೊದಲ ಬಾರಿ ಸಂಸದರಾಗಿ ಆಯ್ಕೆಯಾದ ಡಾ. ಸುಧಾಕರ್‌ಗೆ ಮಹತ್ವದ ಹುದ್ದೆ ನೀಡಲಾಗಿದೆ. ಇದಕ್ಕೆ ಸಂಸದ ಡಾ.ಕೆ.ಸುಧಾಕರ್‌ ಸಂತಸ ವ್ಯಕ್ತಪಡಿಸಿದ್ದಾರೆ. 'ಸಂಸತ್ತಿನ ಹಣಕಾಸು ಸ್ಥಾಯಿ ಸಮಿತಿಯ ಸದಸ್ಯನಾಗಿ ಆಯ್ಕೆಯಾಗಿರುವುದು ಅತ್ಯಂತ ಹೆಮ್ಮೆ ಮತ್ತು ಸಂತಸದ ವಿಷಯ ಎಂದು ಅವರು ಹೇಳಿದ್ದಾರೆ. '2025 ರ ವೇಳೆಗೆ ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿಸುವ ಪ್ರಧಾನಿ ನರೇಂದ್ರ ಮೋದಿಯ ಮಹತ್ವಕಾಂಕ್ಷೆಯ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ, ಸಂಸತ್ತಿನ ಹಣಕಾಸು ಸ್ಥಾಯಿ ಸಮಿತಿಯ ಸದಸ್ಯನಾಗಿ ನನ್ನದೇ ಆದ ಅಳಿಲು ಸೇವೆ ಸಲ್ಲಿಸಲು ಉತ್ಸುಕನಾಗಿದ್ದೇನೆ' ಎಂದು ಅವರು ತಿಳಿಸಿದ್ದಾರೆ.

Advertisement

Advertisement
Next Article