For the best experience, open
https://m.bcsuddi.com
on your mobile browser.
Advertisement

ಸಗರದ ಬೊಮ್ಮಣ್ಣ ಅವರ ವಚನ

07:09 AM Feb 12, 2024 IST | Bcsuddi
ಸಗರದ ಬೊಮ್ಮಣ್ಣ ಅವರ ವಚನ
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

Advertisement

ವಚನ: :

ತನುವಿನ ಮಹಾಮನೆಯಲ್ಲಿ ಮಾಡುವ ಮಾಟ,

ಘನಕ್ಕೆ ಘನವೆಂದು ಎದ್ದಿತ್ತು ಉಪ್ಪರಗುಡಿ

ಲೀಲೋಲ್ಲಾಸವೆಂಬ ಕಳೆ ನೆಟ್ಟಿತ್ತು , ಭವವಿರಹಿತನೆಂಬ ಗುಡಿಗಟ್ಟಿತ್ತು ,

ಮಾಡುವ ದಾಸೋಹಕ್ಕೆ ಕೇಡಿಲ್ಲಾ ಎಂದು.

ಕಾಯ ಸವೆದು ಮನಮುಟ್ಟಿ, ಭಾವನಿಶ್ಚಯವಾಗಿ ಮಾಟಕೂಟಸಂದಿತ್ತು ,

ಮಹಾಮನೆ ಮಹವನೊಡಗೂಡಿತ್ತು ,

ಕಾಯದ ಕಣೆ ಹಿಂಗಿತ್ತು, ಭಾವಗೂಡಿ ಅಳಿಯಿತ್ತು

ಸಗರದ ಬೊಮ್ಮನೊಡೆಯತನುಮನ ಸಂಗಮೇಶ್ವರಲಿಂಗವು ತಾನಾದಲ್ಲಿ ,

-ಸಗರದ ಬೊಮ್ಮಣ್ಣ

Tags :
Author Image

Advertisement