For the best experience, open
https://m.bcsuddi.com
on your mobile browser.
Advertisement

ಸಚಿವ ನಾಗೇಂದ್ರ ರಾಜೀನಾಮೆ ಆಗ್ರಹಿಸಿ ಸಿಎಂ ನಿವಾಸ ಬಳಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

01:25 PM May 30, 2024 IST | Bcsuddi
ಸಚಿವ ನಾಗೇಂದ್ರ ರಾಜೀನಾಮೆ ಆಗ್ರಹಿಸಿ ಸಿಎಂ ನಿವಾಸ ಬಳಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
Advertisement

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ 187 ಕೋಟಿ ರೂ. ಅವ್ಯವಹಾರದ ಹಿನ್ನೆಲೆಯಲ್ಲಿ ಸಚಿವ ನಾಗೇಂದ್ರ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಎಸ್.ಟಿ ಮೋರ್ಚಾ ವತಿಯಿಂದ ಇಂದು ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

‘ಧಿಕ್ಕಾರ ಧಿಕ್ಕಾರ, ಸಚಿವರಿಗೆ ಧಿಕ್ಕಾರ’, ‘ಸರಕಾರಕ್ಕೆ ಧಿಕ್ಕಾರ’ ಎಂಬ ಘೋಷಣೆಗಳನ್ನು ಕೂಗಲಾಯಿತು. ಪೊಲೀಸರು ಈ ಸಂದರ್ಭದಲ್ಲಿ ಕಾರ್ಯಕರ್ತರನ್ನು ಬಂಧಿಸಿದರು. ಅಕ್ರಮವಾಗಿ ಅಮಾಯಕರಾದ ತಮ್ಮನ್ನು ಬಂಧಿಸಲಾಗುತ್ತಿದೆ ಎಂದು ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು.

‘ದಲಿತ ವಿರೋಧಿ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ’ ಕೂಗಿದ ಕಾರ್ಯಕರ್ತರು, ‘ಅಯ್ಯಯ್ಯೋ ಅನ್ಯಾಯ, ಅನ್ಯಾಯ’ ಎಂದು ಘೋಷಣೆ ಕೂಗಿದರು. ಸುಮಾರು 187 ಕೋಟಿ ರೂಪಾಯಿ ಅವ್ಯವಹಾರದ ಹಿನ್ನೆಲೆಯಲ್ಲಿ ನೊಂದು ಆತ್ಮಹತ್ಯೆ ಮಾಡಿಕೊಂಡ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಅವರು ಡೆತ್ ನೋಟಿನಲ್ಲಿ ಸಚಿವರ ಹೆಸರನ್ನು ಉಲ್ಲೇಖಿಸಿದ್ದು, ಸಚಿವರು ಕೂಡಲೇ ರಾಜೀನಾಮೆ ಕೊಡಬೇಕೆಂದು ಆಗ್ರಹಿಸಲಾಯಿತು.

Advertisement

Author Image

Advertisement