For the best experience, open
https://m.bcsuddi.com
on your mobile browser.
Advertisement

'ಸಚಿವ ಪ್ರಹ್ಲಾದ್ ಜೋಶಿ ಭಯೋತ್ಪಾದಕ' - ಸಿಎಂ ಸಿದ್ದರಾಮಯ್ಯ

04:25 PM Oct 13, 2024 IST | BC Suddi
 ಸಚಿವ ಪ್ರಹ್ಲಾದ್ ಜೋಶಿ ಭಯೋತ್ಪಾದಕ    ಸಿಎಂ ಸಿದ್ದರಾಮಯ್ಯ
Advertisement

ಹುಬ್ಬಳ್ಳಿ :ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಒಬ್ಬ ಭಯೋತ್ಪಾದಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.

ಹಳೇ ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣವನ್ನು ಸರ್ಕಾರ ವಾಪಸ್​​ ಪಡೆದಿದ್ದಕ್ಕೆ ಸರ್ಕಾರದ ವಿರುದ್ಧ ವಿರೋಧ ಪಕ್ಷದ ವಿರೋಧ ವ್ಯಕ್ತವಾಗಿದೆ. ರಾಜ್ಯ ಬಿಜೆಪಿ ನಾಯಕರು ಸಿಎಂ ವಿರುದ್ಧ ಹೇಳಿಕೆಗಳನ್ನು ನೀಡಿ ಕಿಡಿಕಾರಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ ಹುಬ್ಬಳ್ಳಿಯಲ್ಲಿ ಈ ರೀತಿ ಹೇಳಿಕೆ ನೀಡಿದ್ದಾರೆ.

ರವಿವಾರ ಹುಬ್ಬಳ್ಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿದ್ದ ಸಮಯದಲ್ಲಿ ಬಿಜೆಪಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿತು. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಭಯೋತ್ಪಾದಕ ಎಂದು ಹೇಳಿದ್ದಾರೆ.

Advertisement

Author Image

Advertisement