ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತ
10:57 AM Dec 28, 2023 IST | Bcsuddi
Advertisement
ತುಮಕೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ತುಮಕೂರಿನ ನಂದಿಹಳ್ಳಿ ಬಳಿ ಬುಧವಾರ ತಡರಾತ್ರಿ ನಡೆದಿದೆ.
ಸಚಿವ ಮಧು ಬಂಗಾರಪ್ಪ ಅವರು ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಸಚಿವರಿಗೆ ಹಾಗೂ ಕಾರಿನಲ್ಲಿದ್ದ ಇತರರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.
ಚಲಿಸುತ್ತಿದ್ದ ಲಾರಿಗೆ ಸಚಿವರ ಕಾರು ಹಿಂಭಾಗದಿಂದ ಗುದ್ದಿದೆ. ಪರಿಣಾಮ ಸಚಿವರ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಅಪಘಾತದ ಬಳಿಕ ಸಚಿವ ಮಧು ಬಂಗಾರಪ್ಪ ಅವರು ಬೇರೊಂದು ಕಾರಿನಲ್ಲಿ ಬೆಂಗಳೂರಿಗೆ ತೆರಳಿದ್ದಾರೆ ಎನ್ನಲಾಗಿದೆ. ಇನ್ನು ಈ ಘಟನೆ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Advertisement