ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'ಸಮೀಕ್ಷೆಗಳನ್ನು ಮೀರಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಲಿದೆ' - ಜೋಶಿ ವಿಶ್ವಾಸ

04:32 PM Jun 02, 2024 IST | Bcsuddi
Advertisement

ಬೆಂಗಳೂರು: ಚುನಾವಣೋತ್ತರ ಸಮೀಕ್ಷೆಗಳನ್ನು ಮೀರಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದು ಖಚಿತ. ಬಿಜೆಪಿ ಯಾವತ್ತಿಗೂ ಇದನ್ನ ಹೇಳುತ್ತಲೇ ಬಂದಿದೆ. ಆದರೆ, ಕೆಲವರು ಸಂಶಯ ವ್ಯಕ್ತಪಡಿಸುತ್ತಿದ್ದರು. ಈಗ ಚುನಾವಣಾ ಸಮೀಕ್ಷೆಗಳೇ ಎನ್‌ಡಿಎ ಐತಿಹಾಸಿಕ ಗೆಲುವನ್ನು ಖಚಿತಪಡಿಸಿವೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ನೇತೃತ್ವದಲ್ಲಿ ಎನ್‌ಡಿಎ ಪ್ರಚಂಡ ಬಹುಮತದಿಂದ ಗೆಲ್ಲಲಿದೆ. ಕರ್ನಾಟಕದಲ್ಲೂ 25ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದ ಅವರು, ಜನರ ದಿಕ್ಕು ತಪ್ಪಿಸುವಲ್ಲಿ, ಸುಳ್ಳು ಹೇಳುವುದರಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು. ವಾಸ್ತವವನ್ನೇ ಮರೆ ಮಾಚುತ್ತಾರೆ ಎಂದು ಆರೋಪಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಚಿವ ನಾಗೇಂದ್ರ ಬಂಧನವಾದರೆ ಎಲ್ಲವೂ ಬಯಲಾಗಲಿದೆ. ಸಚಿವರನ್ನ ಬಂಧಿಸಿದಲ್ಲಿ ಈ ಭ್ರಷ್ಟಾಚಾರ ಹಗರಣದಲ್ಲಿ ಸಿಎಂ ಸೇರಿದಂತೆ ಮತ್ಯಾರು, ಭಾಗಿಯಾಗಿದ್ದಾರೆ? ಅವರ ಪಾತ್ರ ಏನಿದೆ? ಎಂಬುದು ಗೊತ್ತಾಗಲಿದೆ. ಹಾಗಾಗಿ ರಾಜ್ಯ ಸರ್ಕಾರ ಮೊದಲು ಸಚಿವ ನಾಗೇಂದ್ರರನ್ನ ಬಂಧಿಸಲಿ ಎಂದು ಒತ್ತಾಯಿಸಿದರು.

 

Advertisement
Next Article