ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಸರ್ಕಾರದಿಂದ ಹೊಸ ಬಿಪಿಎಲ್ ಕಾರ್ಡ್ ವಿತರಣೆಗೆ ನಿರ್ಧಾರ..! ನೀವು ಅರ್ಜಿ ಹಾಕಿದ್ದರೆ ಚೆಕ್‌ ಮಾಡಿ

04:12 PM Feb 01, 2024 IST | Bcsuddi
Advertisement

ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ:

ದೇಶದ ಎಲ್ಲ ಜನತೆಗೆ ರೇಷನ್‌ ಕಾರ್ಡ್‌ ಮುಖ್ಯ ದಾಖಲೆಯಾಗಿದೆ. ಸರ್ಕಾರದ ಯೋಜನೆ ಪ್ರಯೋಜನ ಪಡೆಯಲು, ಆರೋಗ್ಯ ಸೇವೆಯಲ್ಲಿ ರಿಯಾಯಿತಿ ಪಡೆಯಲು ಹಾಗೂ ಇತರೆ ಸರ್ಕಾರಿ ಕೆಲಸಗಳಿಗೂ ಕೂಡ ರೇಷನ್‌ ಕಾರ್ಡ್‌ ಹೆಚ್ಚು ಅನುಕೂಲಕರವಾಗಿದೆ. ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ರಾಜ್ಯ ಸರ್ಕಾರದಿಂದ ವಿಶೇಷ ಅನ್ನಭಾಗ್ಯ ಯೋಜನೆ ಯಂತಹ ಯೋಜನೆಗಳು ಕೂಡ ಜಾರಿಗೆ ಬಂದಿವೆ.

Advertisement

ಇದೀಗ ಸರ್ಕಾರ ರೇಷನ್ ಕಾರ್ಡ್ ಅಗತ್ಯವಾಗಿರುವ ದಾಖಲೆ ಎನ್ನುವ ಕಾರಣಕ್ಕೆ ರೇಷನ್ ಕಾರ್ಡ್ ನಲ್ಲಿ ಹೆಸರಿನಿಂದ ಹಿಡಿದು ವಿಳಾಸದ ವರೆಗೆ ಎಲ್ಲ ಮಾಹಿತಿಗಳು ಸರಿಯಾಗಿ ಇರಬೇಕು ಎನ್ನುವ ಕಾರಣಕ್ಕೆ, ರೇಷನ್ ಕಾರ್ಡ್ ತಿದ್ದುಪಡಿಗೂ ಕೂಡ ಅವಕಾಶ ಮಾಡಿ ಕೊಟ್ಟಿತ್ತು.

ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಲು ಬಿಪಿಎಲ್ ರೇಷನ್ ಕಾರ್ಡ್ ಬಹಳ ಮುಖ್ಯವಾಗಿರುವ ಗುರುತಿನ ಕಾರ್ಡ್ ಆಗಿದ್ದು, ಇದರಲ್ಲಿ ಅಗತ್ಯ ಇರುವ ತಿದ್ದುಪಡಿಗೆ ಈಗಾಗಲೇ ನಾಲ್ಕು ಬಾರಿ ಅವಕಾಶ ಮಾಡಿಕೊಡಲಾಗಿತ್ತು. ಆದರೆ ಕೆಲವು ತಾಂತ್ರಿಕ ದೋಷಗಳಿಂದ ಎಲ್ಲರೂ ತಿದ್ದುಪಡಿ ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಹಾಗಾಗಿ ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಸರ್ಕಾರ ಸದ್ಯದಲ್ಲಿಯೇ ಮತ್ತೆ ಅವಕಾಶ ನೀಡಲಿದೆ.

ಹೊಸ ಬಿಪಿಎಲ್ ಕಾರ್ಡ್ ವಿತರಣೆ:

ಹೊಸ ಬಿಪಿಎಲ್ ಕಾರ್ಡ್ ಪಡೆದುಕೊಳ್ಳಲು ಸಾಕಷ್ಟು ಜನರು ಅರ್ಜಿ ಸಲ್ಲಿಸಿ ಎರಡುವರೆ ವರ್ಷಗಳ ಕಳೆದವು. ಕರೋನಾ ಕಾರಣದಿಂದಾಗಿ ಹಾಗೂ ವಿಧಾನಸಭಾ ಚುನಾವಣೆಯ ನೀತಿ ಸಂಹಿತೆಯ ಕಾರಣದಿಂದಾಗಿ ಕಳೆದ ಎರಡುವರೆ ವರ್ಷಗಳಿಂದ ಅರ್ಜಿಗಳನ್ನ ಪರಿಶೀಲನೆ ನಡೆಸಿ ವಿತರಣೆ ಮಾಡಲು ಸದ್ಯವಾಗಿಲ್ಲ. ಅದಕ್ಕಾಗಿ ಸದ್ಯದಲ್ಲೆ ಹೊಸ ಬಿಪಿಎಲ್‌ ಕಾರ್ಡ್‌ಗಳನ್ನು ವಿತರಿಸಲಾಗುವುದು.

ಆದರೆ ಇದರ ಬಗ್ಗೆ ಈಗ ಮಹತ್ವದ ಮಾಹಿತಿಯನ್ನು ನೀಡಿರುವ ಆಹಾರ ಸಚಿವ ಕೆಎಚ್ ಮುನಿಯಪ್ಪ, ಇನ್ನು ಕೆಲವೇ ದಿನಗಳಲ್ಲಿ ಹೊಸ ಬಿಪಿಎಲ್ ಕಾರ್ಡ್ ವಿತರಣೆ ಮಾಡುವುದಾಗಿ ತಿಳಿಸಿದ್ದಾರೆ. ಬಿಪಿಎಲ್ ಕಾರ್ಡ್ ಇರದೆ ಸಾಕಷ್ಟು ಕುಟುಂಬಗಳು ಅನ್ನಭಾಗ್ಯ ಯೋಜನೆ ಹಾಗೂ ಗೃಹಲಕ್ಷ್ಮಿ ಯೋಜನೆ ಅಂತ ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗಿದ್ದಾರೆ. ಹಾಗಾಗಿ ಎಲ್ಲರಿಗೂ ಈ ಸೌಲಭ್ಯ ಸಿಗಬೇಕು ಎನ್ನುವ ನಿಟ್ಟಿನಲ್ಲಿ ಸರ್ಕಾರ ಇನ್ನು ಸದ್ಯದಲ್ಲಿ ಹೊಸ ಬಿಪಿಎಲ್ ಕಾರ್ಡ್ ವಿತರಣೆ ಪ್ರಕ್ರಿಯೆ ಆರಂಭಿಸಬಹುದು.

ಹೊಸ ಅರ್ಜಿ ಸಲ್ಲಿಸಲು ಅವಕಾಶವಿದೆಯೇ?

ಒಂದು ರಾಜ್ಯಕ್ಕೆ ಇಷ್ಟೇ ರೇಷನ್ ಕಾರ್ಡ್ ವಿತರಣೆ ಮಾಡಬೇಕು ಎನ್ನುವ ನಿಯಮ ಇರುತ್ತದೆ. ಹಾಗಾಗಿ ಹಳೆಯ ಅರ್ಜಿ ಪರಿಶೀಲಿಸಿ, ರೇಷನ್ ಕಾರ್ಡ್ ವಿತರಣೆ ಆಗದ ಹೊರತು ಮತ್ತೆ ಹೊಸ ಅರ್ಜಿಗೆ ಅವಕಾಶ ಇರುವುದಿಲ್ಲ. ಆದರೆ ಸದ್ಯದಲ್ಲೇ ಹೊಸ ಕಾರ್ಡ್ ವಿತರಣೆ ಆಗುತ್ತಿರುವುದರಿಂದ, ಮತ್ತೆ ಹೊಸ ಅತಿ ಸಲ್ಲಿಸುವುದಕ್ಕೂ ಕೂಡ ಸರ್ಕಾರ ಅವಕಾಶ ಮಾಡಿಕೊಡುವ ನಿರೀಕ್ಷೆ ಇದೆ.

Advertisement
Next Article