ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಸಿಎಂ ಮನೆ ಮುತ್ತಿಗೆ- ಬಿಜೆಪಿಯ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತೆ ನಾಯಕರ ಬಂಧನ

01:45 PM Jul 03, 2024 IST | Bcsuddi
Advertisement

ಬೆಂಗಳೂರು :ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಸಂಬಂಧ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಮತ್ತು ಮೈಸೂರಿನ ಮೂಡಾ ಅವ್ಯವಹಾರವನ್ನು ಖಂಡಿಸಿ ಇಂದು ಸಿಎಂ ಮನೆಗೆ ಮುತ್ತಿಗೆ ಹಾಕಲೆಂದು ಕುಮಾರಕೃಪಾ ವಸತಿ ಗೃಹದಿಂದ ಹೊರಟ ಬಿಜೆಪಿ ಜನಪ್ರತಿನಿಧಿಗಳನ್ನು ಪೊಲೀಸರು ತಡೆದು ಬಂಧಿಸಿದ್ದಾರೆ.

Advertisement

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿ ಬೆಳಿಗ್ಗೆ ಕುಮಾರಕೃಪಾ ವಸತಿ ಗೃಹದಿಂದ ಕಾಲ್ನಡಿಗೆ ಮೂಲಕ ಹೊರಟು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಗೆ ಮುತ್ತಿಗೆ ಹಾಕಲು ಸಿದ್ಧತೆ ನಡೆಸಲಾಗಿತ್ತು. ಅದರಂತೆ, ಶಾಸಕರು, ಮೇಲ್ಮನೆ ಸದಸ್ಯರು ಮತ್ತು ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸೇರಿದ್ದರು.

ವಿಜಯೇಂದ್ರ, ಆರ್.ಅಶೋಕ್ ಅವರ ನೇತೃತ್ವದಲ್ಲಿ ಶಾಸಕರು ಹೊರಬರುತ್ತಿದ್ದಂತೆ ತಡೆದ ಪೊಲೀಸರು ಎಲ್ಲರನ್ನೂ ಬಂಧಿಸಿದರು.ಇದೇವೇಳೆ ಬಿಜೆಪಿ ಮುಖಂಡರು ಮತ್ತು ಪೊಲೀಸ್ ಅಧಿಕಾರಿಗಳ ನಡುವೆ ಮಾತಿನ ಚಕಮಕಿಯೂ ನಡೆಯಿತು. ಶಾಸಕರು ‘ಭ್ರಷ್ಟ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ’ ಕೂಗಿದರು. ಹಲವು ಜನಪ್ರತಿನಿಧಿಗಳನ್ನು ಪೊಲೀಸರು ಬಲವಂತವಾಗಿ ವಶಕ್ಕೆ ಪಡೆದರು.

‘ಮೋಸ, ಅನ್ಯಾಯ ಅನ್ಯಾಯ’ ಎಂದು ಕೂಗಿದ ಆರ್.ಅಶೋಕ್ ಅವರು, ‘ಈ ಸರಕಾರದ ದೌರ್ಜನ್ಯವನ್ನು ಖಂಡಿಸುತ್ತೇನೆ; ವಿಪಕ್ಷ ನಾಯಕನಾಗಿ ಪ್ರತಿಭಟನೆಗೆ ಅವಕಾಶ ಕೊಡುತ್ತಿಲ್ಲ’ ಎಂದು ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿದರು.

 

Advertisement
Next Article