For the best experience, open
https://m.bcsuddi.com
on your mobile browser.
Advertisement

'ಸಿಎಂ ಮುಂದೆ ಅನಂತ್‌ ಕುಮಾರ್‌ ಪುಟಗೋಸಿಗೆ ಸಮನಲ್ಲ'- ತಂಗಡಗಿ

04:53 PM Jan 14, 2024 IST | Bcsuddi
 ಸಿಎಂ ಮುಂದೆ ಅನಂತ್‌ ಕುಮಾರ್‌ ಪುಟಗೋಸಿಗೆ ಸಮನಲ್ಲ   ತಂಗಡಗಿ
Advertisement

ಕೊಪ್ಪಳ: ಸಿಎಂ ಸಿದ್ದರಾಮಯ್ಯ ಮುಂದೆ ಸಂಸದ ಅನಂತ್ ಕುಮಾರ್‌ ಹೆಗಡೆ ಪುಟಗೋಸಿಗೆ ಸಮನಲ್ಲ ಎಂದು ಸಚಿವ ಶಿವರಾಜ್‌ ತಂಗಡಗಿ ತಿರುಗೇಟು ನೀಡಿದ್ದಾರೆ.

ಸಂಸದ ಅನಂತ್‌ ಕುಮಾರ್‌ ಹೆಗಡೆ ಹೇಳಿಕೆಗೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ, ಕಾಂಗ್ರೆಸ್ ಬಗ್ಗೆ ಮಾತನಾಡುವ ನಿಮ್ಮಂಥ ನಾಯಿಗಳಿಗೆ ನಾನು ಅಲ್ಲಿಗೆ ಬಂದು ಉತ್ತರ ಕೊಡಬೇಕಾಗುತ್ತೆ ಮಗನೆ ಎಂದು ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ.

ಅನಂತ್‌ ಕುಮಾರ್‌ಗೆ ಅವನದೇ ಭಾಷೆಯಲ್ಲಿ ಉತ್ತರ ಕೊಡಲು ನನಗೂ ಬರುತ್ತೆ.‌ ಆದರೆ ನನ್ನ ಹಿರಿಯರು ನನಗೆ ಸಂಸ್ಕಾರ ಕಲಿಸಿದ್ದಾರೆ. ಅದಕ್ಕಾಗಿ ಅವನಿಗೆ ಕೆಟ್ಟ ಭಾಷೆಯಲ್ಲಿ ಉತ್ತರ ಕೊಡುತ್ತಿಲ್ಲ. ಬದಲಿಗೆ ಎಚ್ಚರಿಕೆ ನೀಡುತ್ತಿದ್ದೇನೆ ಎಂದು ಹೇಳಿದರು.

Advertisement

ಇದೇ ಮೊದಲು ಮತ್ತು ಕೊನೆ. ಸಿದ್ದರಾಮಯ್ಯ ಬಗ್ಗೆ ಅವನು ಮಾತನಾಡಬಾರದು. ಸಿದ್ದರಾಮಯ್ಯ ಅವರಿಗೆ ಆಗಿರುವ ಅನುಭವ‌ದಷ್ಟು ಅವನಿಗೆ ವಯಸ್ಸಾಗಿಲ್ಲ. ಅವರ ಕಾಲಿನ ಧೂಳಿಗೂ ಹೆಗಡೆ ಸಮನಲ್ಲ. ನಾನೂ ಕೂಡ ಹೀಗೆ ಮಾತನಾಡಬಾರದು. ಆದರೆ ಅವನಾಡಿದ ಮಾತಿನಿಂದ ನೋವಾಗಿ ಹೀಗೆ ಹೇಳಿದ್ದೇನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹೀಗೆ ಮಾತು ಮುಂದುವರೆಸಿದರೆ, ನಾನು ಮುಂದೆ ಉತ್ತರ ಕರ್ನಾಟಕದ ಭಾಷೆಯಲ್ಲಿ ಉತ್ತರ ಕೊಡ ಬೇಕಾಗುತ್ತೆ. ಇವನಿಗಿಂತ ಕೆಟ್ಟ ಭಾಷೆಯಲ್ಲಿ ಉತ್ತರ ಕೊಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಸಿದ್ದರಾಮಯ್ಯ,‌ ಪ್ರಧಾನಿ ಮೋದಿ ಬಗ್ಗೆ ಏಕವಚನದಲ್ಲಿ ಮಾತನಾಡಿದ ಬಗ್ಗೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ, ಮೋದಿ ಅವರಿಗೆ ಬಾಯಿ ತಪ್ಪಿ ಏಕವಚನದಲ್ಲಿ ಮಾತನಾಡಿರಬಹುದು. ಆದರೆ ಇಂಥ ಕೆಟ್ಟ ಭಾಷೆ ಬಳಿಸಿ ಮಾತನಾಡಿಲ್ಲ ಎಂದು ಸಬೂಬು ನೀಡಿದರು.

Author Image

Advertisement