For the best experience, open
https://m.bcsuddi.com
on your mobile browser.
Advertisement

ಸಿಎಂ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ 2 ಪ್ರತ್ಯೇಕ ದೂರು ಸಲ್ಲಿಕೆ

05:12 PM Jul 16, 2024 IST | Bcsuddi
ಸಿಎಂ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ 2 ಪ್ರತ್ಯೇಕ ದೂರು ಸಲ್ಲಿಕೆ
Advertisement

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ಎರಡು ಪ್ರತ್ಯೇಕ ದೂರು ಸಲ್ಲಿಕೆಯಾಗಿದೆ.

ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಚುನಾವಣಾ ಆಯೋಗಕ್ಕೆ ಎರಡು ಪ್ರತ್ಯೇಕ ದೂರು ಸಲ್ಲಿಸಿದ್ದಾರೆ. 2018-23ರ ಚುನಾವಣೆಯ ಅಫಿಡವಿಟ್ ನಲ್ಲಿ ಸಿದ್ದರಾಮಯ್ಯ ಅವರು ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಒಂದು ದೂರು ಸಲ್ಲಿಸಿದ್ದಾರೆ.

2018ರ ವಿಧಾನಸಭೆ ಚುನಾವಣೆ ಸಂದರ್ಭ ಸಿದ್ದರಾಮಯ್ಯ ಅವರು ನೀಡಿದ್ದ ಅಫಿಡವಿಟ್ ನಲ್ಲಿ ಪತ್ನಿ ಪಾರ್ವತಿ ಹೆಸರಿನಲ್ಲಿ 3 ಎಕರೆ 16 ಗುಂಟೆ ಕೃಷಿ ಜಮೀನು ಇದ್ದು, ಇದರ ಮೌಲ್ಯ 25 ಲಕ್ಷ ರೂ. ಎಂದು ನಮೂದಿಸಿದ್ದಾರೆ. ಆದರೆ, 2005ರಲ್ಲೇ ಈ ಜಮೀನು ಪರಿವರ್ತನೆ ಮಾಡಿಸಿದ್ದ ದಾಖಲೆ ನೀಡಿ ದೂರು ಸಲ್ಲಿಸಿದ್ದಾರೆ. 2023ರ ವಿಧಾನಸಭೆ ಚುನಾವಣೆ ವೇಳೆ 14 ಮುಡಾ ಸೈಟ್ ಗಳ ಮೌಲ್ಯ ಕೇವಲ 8 ಕೋಟಿ ಎಂದು ಅಫಿಡವಿಟ್ ನಲ್ಲಿ ನಮೂದಿಸಿದ್ದಾರೆ ಎಂದು ಆರೋಪಿಸಿ ದೂರು ಸಲ್ಲಿಸಲಾಗಿದೆ.

Advertisement

ಆದರೆ ಮುಡಾದ 14 ಸೈಟ್ ಗಳ ಅಸಲಿ ಮಾರುಕಟ್ಟೆ ಮೌಲ್ಯ 34 ಕೋಟಿ ರೂಪಾಯಿಯಾಗಿದ್ದು, ಉದ್ದೇಶಪೂರ್ವಕವಾಗಿ ಸಿಎಂ ಸಿದ್ದರಾಮಯ್ಯ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಟಿ.ಜೆ.ಅಬ್ರಹಾಂ ಅವರು ಮುಖ್ಯ ಚುನಾವಣಾಧಿಕಾರಿಗೆ ಎರಡನೇ ದೂರು ಸಲ್ಲಿಕೆ ಮಾಡಿದ್ದಾರೆ.

Author Image

Advertisement