ಸಿಎಂ ಸಿದ್ದರಾಮಯ್ಯ ಶಲ್ಯಕ್ಕೆ ತಗುಲಿದ ಬೆಂಕಿ - ತಪ್ಪಿದ ಭಾರೀ ಅನಾಹುತ
03:09 PM Oct 02, 2024 IST | BC Suddi
Advertisement
ಬೆಂಗಳೂರು :ಕಿತ್ತೂರು ಉತ್ಸವದಲ್ಲಿ ಜ್ಯೋತಿ ಬೆಳಗುವ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಟ್ಟೆಗೆ ಬೆಂಕಿ ತಗುಲಿದ ಘಟನೆ ನಡೆದಿದೆ.
ಬೆಂಕಿ ತಗುಲಿದ್ದನ್ನು ಕಂಡ ಗನ್ ಮ್ಯಾನ್ ಕೂಡಲೆ ಬೆಂಕಿ ನಂದಿಸಿ ದೊಡ್ಡ ಅಪಾಯವನ್ನು ತಪ್ಪಿಸಿದ್ದಾರೆ. ವಿಧಾನಸೌಧದ ಮುಂಭಾಗ ನಡೆದ ಕಿತ್ತೂರು ಉತ್ಸವ ಕಾರ್ಯಕ್ರಮದಲ್ಲಿ ಘಟನೆ ನಡೆದಿದ್ದು, ಸಿಎಂ ಸಿದ್ದರಾಮಯ್ಯ ಅವರು ಕಿತ್ತೂರು ಉತ್ಸವಕ್ಕೆ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡುವ ಸಂಧರ್ಭದಲ್ಲಿ ಈ ಘಟನೆ ನಡೆದಿದೆ.
ಕಿತ್ತೂರು ಉತ್ಸವದ ಠಥಕ್ಕೆ ಹಸಿರು ನಿಶಾನೆ ತೋರಿಸುವ ವೇಳೆ ಪಕ್ಕದಲ್ಲೇ ಇದ್ದ ದೀಪದ ಬೆಂಕಿ ಸಿದ್ದರಾಮಯ್ಯ ಅವರ ಶಲ್ಯಕ್ಕೆ ತಾಗಿದೆ. ಕೂಡಲೆ ಗನ್ ಮ್ಯಾನ್ ಬೆಂಕಿ ನಂದಿಸಿದ್ದಾರೆ. ಇದರಿಂದ ಭಾರಿ ಅನಾಹುತ ತಪ್ಪಿದೆ.
Advertisement