For the best experience, open
https://m.bcsuddi.com
on your mobile browser.
Advertisement

ಸಿದ್ದರಾಮಯ್ಯರನ್ನ ಲೋಕಾಯುಕ್ತ ವಿಚಾರಣೆಗೆ ಒಳಪಡಿಸಿ- ಸ್ನೇಹಮಯಿ ಕೃಷ್ಣ ಮನವಿ

01:29 PM Oct 14, 2024 IST | BC Suddi
ಸಿದ್ದರಾಮಯ್ಯರನ್ನ ಲೋಕಾಯುಕ್ತ ವಿಚಾರಣೆಗೆ ಒಳಪಡಿಸಿ  ಸ್ನೇಹಮಯಿ ಕೃಷ್ಣ ಮನವಿ
Advertisement

ಮೈಸೂರು : ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಲೋಕಾಯುಕ್ತ ವಿಚಾರಣೆಗೆ ಒಳಪಡಿಸುವಂತೆ ಒಳಪಡಿಸುವಂತೆ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಲೋಕಾಯುಕ್ತಕ್ಕೆ ಇಂದು ಮನವಿ ಸಲ್ಲಿಸಿದ್ದಾರೆ.

ಮೈಸೂರಿನ ಲೋಕಾಯುಕ್ತ ಕಚೇರಿಗೆ ಸ್ನೇಹಮಹಿ ಕೃಷ್ಣ ಪತ್ರದ ಮೂಲಕ ಮನವಿ ಸಲ್ಲಿಸಿದ್ದಾರೆ. ಅಕ್ಟೋಬರ್ 10ರಂದು ವಾಟ್ಸಪ್ ಮೂಲಕ ಮನವಿ ಮಾಡಿದ್ದ ಸ್ನೇಹಮಯಿ ಕೃಷ್ಣ ಅವರು, ಇಂದು ಖುದ್ದು ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಕೆ ಮಾಡಿದ್ದಾರೆ.

ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯರನ್ನು ವಿಚಾರಣೆಗೆ ಒಳಪಡಿಸಬೇಕು. ಅವರು ಸಾಕ್ಷಿಗಳ ನಾಶ ಮಾಡುತ್ತಿದ್ದಾರೆ. ಮುಚ್ಚಿಡುತ್ತಿದ್ದಾರೆ. ಭಾಷಣದಲ್ಲಿ ಪ್ರಚೋದನೆ ನೀಡುತ್ತಿದ್ದಾರೆ. ಸುಳ್ಳು ಜಾಹೀರಾತು ನೀಡುತ್ತಿದ್ದಾರೆ. ವಿಚಾರಣೆಗೆ ಒಳಪಡಿಸಿ, ಬಂಧಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ. ಜೊತೆಗೆ ಲೋಕಾಯುಕ್ತ ಕಚೇರಿಗೆ ಕೂಡಲೆ ಸಿಸಿಟಿವಿ ಅಳವಡಿಸಿ, ಕೆಪಿಸಿಸಿ ವಕ್ತಾರರು ಪದೇ ಪದೇ ಲೋಕಾಯುಕ್ತ ಕಚೇರಿಗೆ ಬರುತ್ತಿದ್ದಾರೆ ಎಂಬ ಮಾಹಿತಿ ಇದೆ ಎಂದು ಆರೋಪಿಸಿದ್ದಾರೆ.

Advertisement

Author Image

Advertisement